ದಾವಣಗೆರೆ: ಈದ್ಗಾ ಮೈದಾನ ನಿಮ್ಮಪ್ಪನ ಮನೆ ಆಸ್ತಿ ಅಲ್ಲ. ಭಾರತದ ಪ್ರತಿಯೊಂದು ಇಂಚಿಂಚು ಭೂಮಿ ಹಿಂದುಗಳದ್ದು ಎಂದು ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಶಾಸಕ ರೇಣುಕಚಾರ್ಯ ವಾಗ್ದಾಳಿ ನಡೆಸಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ಮಾತನಾಡಿದ ಅವರು, ಈ ಭೂಮಿಯಲ್ಲಿ ವಿಘ್ನೇಶ್ವರನ ಪ್ರತಿಷ್ಠಾಪನೆ, ಭಾರತಾಂಬೆಯ ಧ್ವಜ ಹಾರಿಸಲು ಯಾವ ದೊಣ್ಣೆ ನಾಯಕನ ಅಪ್ಪಣೆ ಬೇಕಿಲ್ಲ ಎಂದರು.
ಬೆಂಗಳೂರು, ಹೊನ್ನಾಳಿ ಸೇರಿ ಅನೇಕ ಕಡೆ ಈ ರೀತಿ ಭೂಮಿಯನ್ನು ನುಂಗಿ ಹಾಕಿದ್ದಾರೆ. ಅವುಗಳನ್ನು ಬಿಡಿಸಿಕೊಳ್ಳುವ ಕೆಲಸ ನಾವು ಮಾಡುತ್ತೇವೆ ಎಂದು ಅವರು ಹೇಳಿದರು.