ದಾವಣಗೆರೆ: ಕೋವಿಡ್ ನಿಯಮಾವಳಿಗಳನ್ನು ಪಾಲಿಸದೆ ವ್ಯಾಪಾರ ನಡೆಸುತ್ತಿದ್ದ ಅಂಗಡಿ ಮಾಲೀಕರಿಗೆ ಪಾಲಿಕೆ ಅಧಿಕಾರಿಗಳು ದಂಡದ ವಿಧಿಸಿ, ಬಿಸಿ ಮುಟ್ಟಿಸಿದರು.
ನಗರದ ಕೆ.ಆರ್.ಮಾರುಕಟ್ಟೆಯಲ್ಲಿ ಕೆಲ ಅಂಗಡಿ ಮಾಲೀಕರು ಕೋವಿಡ್ ನಿಯಮಗಳನ್ನು ಗಾಳಿಗೆ ತೂರಿ ವ್ಯಾಪಾರ ನಡೆಸುತ್ತಿದ್ದರು. ಇದನ್ನು ಗಮನಿಸಿದ ಪಾಲಿಕೆ ಅಧಿಕಾರಿಗಳು, ಅಂಗಡಿ ಮುಚ್ಚಿಸಿ ದಂಡ ವಿಧಿಸಿದರು.