ಕರ್ನಾಟಕ

karnataka

ETV Bharat / city

ಎಸ್​​ಎಸ್​ಎಲ್​ಸಿ ಪರೀಕ್ಷೆ: ಹಿಜಾಬ್ ತೆಗೆದು ಎಕ್ಸಾಂ ಬರೆದ ವಿದ್ಯಾರ್ಥಿನಿಯರು - ಹಿಜಾಬ್​ ತೆಗೆದು ಪರೀಕ್ಷೆ ಬರೆದ ವಿದ್ಯಾರ್ಥಿಗಳು

ಯಾವುದೇ ಆತಂಕವಿಲ್ಲದೇ, ಪರೀಕ್ಷೆ ಬರೆಯಿರಿ ಎಂದು ಆತ್ಮಸ್ಥೈರ್ಯ ತುಂಬಿದರು. ಇನ್ನೂ ಕೆಲ ಮುಖಂಡರು ವಿದ್ಯಾರ್ಥಿಗಳಿಗೆ ಗುಲಾಬಿ ಹೂವು ನೀಡಿ ಪರೀಕ್ಷೆ ಕೇಂದ್ರಕ್ಕೆ ಕಳುಹಿಸಿದರು..

students
ಹಿಜಾಬ್

By

Published : Mar 28, 2022, 3:14 PM IST

Updated : Mar 28, 2022, 3:23 PM IST

ದಾವಣಗೆರೆ :ಹಿಜಾಬ್ ವಿವಾದದ ನಡುವೆ ಇಂದಿನಿಂದ ಎಸ್​ಎಸ್​ಎಲ್​ಸಿ ಪರೀಕ್ಷೆ ಆರಂಭವಾಗಿದೆ. ದಾವಣಗೆರೆಯಲ್ಲಿ 22,226 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಜಿಲ್ಲೆಯಲ್ಲಿ 90 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದೆ. ಪರೀಕ್ಷೆ ಕೇಂದ್ರದ 200 ಮೀಟರ್ ನಿಷೇಧಾಜ್ಞೆ ಹಾಕಲಾಗಿದೆ‌.

ನಗರದ ಸೀತಮ್ಮ ಕಾಲೇಜು ಮುಂಭಾಗ ಬಳಿ ಬಂದ ಮುಸ್ಲಿಂ ಮುಖಂಡರು ಹಿಜಾಬ್​ ಧರಿಸಿ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ ವಿದ್ಯಾರ್ಥಿನಿಯರಿಗೆ ಬುದ್ಧಿವಾದ ಹೇಳಿ ಹಿಜಾಬ್​ ತೆಗೆದು ಪರೀಕ್ಷೆ ಬರೆಯಲು ತಿಳಿಸಿದರು. ಯಾವುದೇ ಆತಂಕವಿಲ್ಲದೇ, ಪರೀಕ್ಷೆ ಬರೆಯಿರಿ ಎಂದು ಆತ್ಮಸ್ಥೈರ್ಯ ತುಂಬಿದರು. ಇನ್ನೂ ಕೆಲ ಮುಖಂಡರು ವಿದ್ಯಾರ್ಥಿಗಳಿಗೆ ಗುಲಾಬಿ ಹೂವು ನೀಡಿ ಪರೀಕ್ಷೆ ಕೇಂದ್ರಕ್ಕೆ ಕಳುಹಿಸಿದರು.

ಜಿಲ್ಲಾಧಿಕಾರಿ ಭೇಟಿ:ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವಿದ್ಯಾರ್ಥಿಗಳಿಗೆ ಧೈರ್ಯ ಹೇಳಿ ಪರೀಕ್ಷೆ ಚೆನ್ನಾಗೆ ಬರೆಯುವಂತೆ ಹುರಿದುಂಬಿಸಿದರು. ದಾವಣಗೆರೆ ನಗರದ ಮೋತಿ ವೀರಪ್ಪ, ಸರ್ಕಾರಿ ಬಾಲಕರ ಪ್ರೌಢ ಶಾಲೆ, ರಾಜನಹಳ್ಳಿ ಸೀತಮ್ಮ ಬಾಲಕಿಯರ ಪ್ರೌಢ ಶಾಲೆಗೆ ಭೇಟಿ ನೀಡಿ, ಎಷ್ಟು ಮಕ್ಕಳು ಪರೀಕ್ಷೆ ಹಾಜರಾಗಿದ್ದಾರೆ ಎಂಬ ಮಾಹಿತಿ ಪಡೆದುಕೊಂಡರು.

ಬಳಿಕ ಮಾತನಾಡಿದ ಡಿಸಿ, ಜಿಲ್ಲೆಯಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆಗಳು ಸುಗಮವಾಗಿ ನಡೆದಿವೆ. ಜಿಲ್ಲೆಯ 90 ಪರೀಕ್ಷಾ ಕೇಂದ್ರಗಳಲ್ಲಿ 22,226 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿದ್ದಾರೆ. ಇಡೀ ಜಿಲ್ಲೆಯಲ್ಲಿ ಹಿಜಾಬ್ ಸಮಸ್ಯೆ ಎಲ್ಲಿಯೂ‌ ಕಂಡು ಬಂದಿಲ್ಲ, ಸರ್ಕಾರದ ಸೂಚನೆಯಂತೆ ಪರೀಕ್ಷೆಗಳು ನಡೆದಿವೆ, ವಿದ್ಯಾರ್ಥಿಗಳು ಆತ್ಯಂತ‌ ಆತ್ಮವಿಶ್ವಾಸದಿಂದ ಪರೀಕ್ಷೆ‌ ಎದುರಿಸುತ್ತಿದ್ದಾರೆ. ಇದೇ ರೀತಿ ಉಳಿದ ಎಲ್ಲ ವಿಷಯಗಳ ಪರೀಕ್ಷೆಗಳೂ ನಡೆಯುತ್ತವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮೊಬೈಲ್ ತಂದು ಸಿಬ್ಬಂದಿಗೆ ಒಪ್ಪಿಸಿದ ವಿದ್ಯಾರ್ಥಿಗಳು:ಹತ್ತನೇ ತರಗತಿಗೆ ಪರೀಕ್ಷೆಗೆ ಮೊಬೈಲ್ ಬಳಕೆಗೆ ಸರ್ಕಾರ ನಿಷೇಧ ಹೇರಿದ್ದರಿಂದ ಸುಮಾರು 26 ಜನ ಮಕ್ಕಳು ಹಾಗೂ ಸಿಬ್ಬಂದಿ ತಂದಿದ್ದ ಮೊಬೈಲ್ ಹಾಗೂ ಡಿಜಿಟಲ್ ವಾಚ್​ಗಳನ್ನು ಸಿಬ್ಬಂದಿಗೆ ಒಪ್ಪಿಸಿದರು.

ಓದಿ:ಹಸುಗೂಸು ಬಿಟ್ಟು ಪರೀಕ್ಷೆ ಬರೆದ ಬಾಣಂತಿ..!!

Last Updated : Mar 28, 2022, 3:23 PM IST

For All Latest Updates

TAGGED:

ABOUT THE AUTHOR

...view details