ಹುಬ್ಬಳ್ಳಿ:ಕೆರೆಯಲ್ಲಿ ಈಜಲು ತೆರಳಿದ ಬಾಲಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಲಘಟಗಿ ತಾಲೂಕಿನ ಹಾರೂಗೇರಿ ಗ್ರಾಮದಲ್ಲಿ ನಡೆದಿದೆ.
ಈಜಲು ತೆರಳಿದ ಬಾಲಕ ಕೆರೆಯಲ್ಲಿ ಮುಳುಗಿ ಸಾವು - ಕೆರೆಯಲ್ಲಿ ಮುಳುಗಿ ಬಾಲಕ ಸಾವು
ಕೆರೆಯಲ್ಲಿ ಈಜಲು ತೆರಳಿದ್ದ ಬಾಲಕನೋರ್ವ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕಲಘಟಗಿ ತಾಲೂಕಿನ ಹಾರೂಗೇರಿ ಗ್ರಾಮದಲ್ಲಿ ನಡೆದಿದೆ.
![ಈಜಲು ತೆರಳಿದ ಬಾಲಕ ಕೆರೆಯಲ್ಲಿ ಮುಳುಗಿ ಸಾವು boy died](https://etvbharatimages.akamaized.net/etvbharat/prod-images/768-512-10363339-thumbnail-3x2-ckm.jpg)
ಮುಳುಗಿ ಸಾವು
ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ಬಾಲಕ
ಶ್ರೀಕಾಂತ ಬಸವರಾಜ ಮುರಳ್ಳಿ (14) ಮೃತಪಟ್ಟ ಬಾಲಕ. ಈತ ನಿನ್ನೆ ಗ್ರಾಮದ ದೊಡ್ಡ ಕೆರೆಯಲ್ಲಿ ಈಜಲು ಹೋಗಿ ಕೆರೆಯಲ್ಲಿ ಮುಳುಗಿದ್ದ. ನಿನ್ನೆಯಿಂದಲೂ ಈತನಿಗಾಗಿ ಶೋಧ ಕಾರ್ಯ ನಡೆಸಲಾಗಿತ್ತು. ಇಂದು ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.
ಘಟನೆಗೆ ಸಂಬಂಧಿಸಿದಂತೆ ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.