ಧಾರವಾಡ: ಕೋವಿಡ್-19 ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ನವಲಗುಂದ ತಾಲೂಕಿನ ಹಾಲಕುಸುಗಲ್ ಗ್ರಾಮದಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಮನೆ ಮನೆಗೆ ತೆರಳಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು.
ಕೊರೊನಾ ಸೋಂಕು ಹರಡದಂತೆ ಅಂಗನವಾಡಿ ಕಾರ್ಯಕರ್ತೆಯರಿಂದ ಜಾಗೃತಿ - ಜಾಗೃತಿ ಮೂಡಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು
ಬೇರೆ ಬೇರೆ ರಾಜ್ಯಗಳಿಂದ ಬಂದ ವಲಸಿಗರ ಮನೆಗೆ ಹೋಗಿ ಹೊರಗೆ ಬಾರದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅಂಗನವಾಡಿ ಕಾರ್ಯಕರ್ತೆಯರು ಸಲಹೆ ನೀಡಿದರು.
![ಕೊರೊನಾ ಸೋಂಕು ಹರಡದಂತೆ ಅಂಗನವಾಡಿ ಕಾರ್ಯಕರ್ತೆಯರಿಂದ ಜಾಗೃತಿ Anganwadi activists are raising awareness](https://etvbharatimages.akamaized.net/etvbharat/prod-images/768-512-6574610-538-6574610-1585394000195.jpg)
ಜಾಗೃತಿ ಮೂಡಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು
ಕೊರೊನಾ ಸೋಂಕು ತಗುಲುವ ಮುನ್ನ ಸಾರ್ವಜನಿಕರು ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳು, ರೋಗದ ಲಕ್ಷಣಗಳು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಕುರಿತು ಜನರಲ್ಲಿ ಅರಿವು ಮೂಡಿಸಿದರು.