ಹುಬ್ಬಳ್ಳಿ: ಚರಂಡಿ ಅಗಲೀಕರಣ ನೆಪದಲ್ಲಿ ಅಧಿಕಾರಿಗಳು ನೇಕಾರ ನಗರದ ಸಿಂದೆ ಕಾಲೋನಿ ನಿವಾಸಿಗಳ ಬಳಿ ಹಣಕ್ಕೆ ಬೇಡಿಕೆ ಇಟ್ಟಿರುವ ಆರೋಪ ಕೇಳಿ ಬಂದಿದೆ.
ಕಾಲೋನಿಯಲ್ಲಿ ಹಾದುಹೋಗಿರುವ ಚರಂಡಿ ನೀರಿನ ಗಟರ್ ಇಲ್ಲಿನ ನಿವಾಸಿಗಳಿಗೆ ತಲೆನೋವಾಗಿ ಪರಿಣಮಿಸಿದೆ. ಈ ಚರಂಡಿ ಅಗಲೀಕರಣ ಕಾಮಗಾರಿ ನಡೆಯುತ್ತಿದೆ. ಅಗಲೀಕರಣಕ್ಕೆ 5 ಲಕ್ಷ ರೂ. ಹಣ ನೀಡಿ ಇಲ್ಲವೇ, ಮನೆ ಖಾಲಿ ಮಾಡಿ ಎಂದು ಅಧಿಕಾರಿಯೊಬ್ಬರು ಬೆದರಿಕೆ ಹಾಕುತ್ತಿದ್ದಾರೆಂದು ಇಲ್ಲಿನ ನಿವಾಸಿಗಳು ಗಂಭೀರ ಆರೋಪ ಮಾಡುತ್ತಿದ್ದಾರೆ.