ಕರ್ನಾಟಕ

karnataka

ETV Bharat / city

ಧಾರವಾಡ ಕಟ್ಟಡ ದುರಂತ: ಹಗಲು ರಾತ್ರಿ ಸೇವೆ ಸಲ್ಲಿಸಿದ ಆಂಬುಲೆನ್ಸ್​ ಸಿಬ್ಬಂದಿಗೆ ಸನ್ಮಾನ - undefined

ಧಾರವಾಡ ಕಟ್ಟಡ ದುರಂತದ ವೇಳೆ 56 ಜನರ ಪ್ರಾಣ ಉಳಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಆಂಬುಲೆನ್ಸ್​ ಚಾಲಕರು ಹಾಗೂ ವೈದ್ಯಕೀಯ ಸಿಬ್ಬಂದಿಗೆ ಜಿವಿಕೆ ಸಂಸ್ಥೆ ವತಿಯಿಂದ ಸನ್ಮಾನ ಮಾಡಲಾಯಿತು.

ಆಂಬುಲೆನ್ಸ್​ ಸಿಬ್ಬಂದಿಗಳಿಗೆ ಸನ್ಮಾನ

By

Published : Apr 25, 2019, 4:37 PM IST

ಧಾರವಾಡ: ರಾಜ್ಯದ ಜನರನ್ನು ಬೆಚ್ಚಿ ಬೀಳಿಸಿದ್ದ ಧಾರವಾಡ ಕಟ್ಟಡ ದುರಂತದ ವೇಳೆ ಸಮಯಕ್ಕೆ ಸರಿಯಾಗಿ ಕಾರ್ಯ ನಿರ್ವಹಿಸಿ, 56 ಜನರ ಪ್ರಾಣ ಉಳಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಆಂಬುಲೆನ್ಸ್​ ಸಿಬ್ಬಂದಿಗಳಿಗೆ ಸನ್ಮಾನ ಮಾಡಲಾಯಿತು.

ನಗರದ ಜಿಲ್ಲಾಸ್ಪತ್ರೆಯಲ್ಲಿ ಆಯೋಜಿಸಲಾಗಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದ ವೇಳೆ ರಕ್ಷಣಾ ಕಾರ್ಯದಲ್ಲಿ ಭಾಗವಹಿಸಿ 24 ಗಂಟೆಗಳ ನಿರಂತರ ತುರ್ತು ವೈದ್ಯಕೀಯ ಸೇವೆಯನ್ನು ಒದಗಿಸಲು ಕಾರಣಕರ್ತರಾದ ಆಂಬುಲೆನ್ಸ್​ ಚಾಲಕರು ಹಾಗೂ ವೈದ್ಯಕೀಯ ಸಿಬ್ಬಂದಿಗೆ ಜಿವಿಕೆ ಸಂಸ್ಥೆ ವತಿಯಿಂದ ಸನ್ಮಾನಿಸಲಾಯಿತು.

ಆಂಬುಲೆನ್ಸ್​ ಸಿಬ್ಬಂದಿಗಳಿಗೆ ಸನ್ಮಾನಿಸುತ್ತಿರುವ ಜಿವಿಕೆ ಸಂಸ್ಥೆ

ಈ ವೇಳೆ ಮಾತನಾಡಿದ ಜಿಲ್ಲಾಸ್ಪತ್ರೆಯ ಸರ್ಜನ್ ಗಿರಿಧರ್ ಕುಕನೂರ್ ಆಂಬುಲೆನ್ಸ್ ಸಿಬ್ಬಂದಿ ಕಾರ್ಯಕ್ಕೆ ಪ್ರಶಂಸೆ ವ್ಯಕ್ತಪಡಿಸಿದರು.

For All Latest Updates

TAGGED:

ABOUT THE AUTHOR

...view details