ಧಾರವಾಡ: ಜಿಲ್ಲೆಯಲ್ಲಿ ಕೊರೊನಾ ಸೋಂಕು ಪತ್ತೆ ಹಿನ್ನೆಲೆಯಲ್ಲಿ ಹೊಸ ಯಲ್ಲಾಪೂರದಲ್ಲಿ ಜಾಗೃತಿ ಕಾರ್ಯ ನಡೆಯುತ್ತಿದೆ.
ಕೊರೊನಾ ಪತ್ತೆ: ಮನೆ ಮನೆಗೆ ತೆರಳಿ ಸಮೀಕ್ಷೆ ಕಾರ್ಯ ಪ್ರಾರಂಭಿಸಿದ ಆರೋಗ್ಯ ಇಲಾಖೆ - ಧಾರವಾಡ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಸೋಂಕು ಪತ್ತೆ
ಧಾರವಾಡದಲ್ಲಿ ನಿಷೇಧಾಜ್ಞೆ ಮುಂದುವರೆದಿದ್ದು, ಕೊರೊನಾ ಪಾಸಿಟಿವ್ ಸೋಂಕು ಪತ್ತೆಯಾದ ಹಿನ್ನೆಲೆ ಮನೆ ಮನೆಗೆ ತೆರಳಿ ಆರೋಗ್ಯ ಇಲಾಖೆ ಸರ್ವೆ ಕಾರ್ಯ ನಡೆಸುತ್ತಿದೆ.
ಕೊರೊನಾ ಪತ್ತೆ
ಜಿಲ್ಲೆಯಲ್ಲಿ ನಿಷೇಧಾಜ್ಞೆ ಮುಂದುವರೆದಿದ್ದು, ಕೆಎಸ್ಆರ್ಟಿಸಿ, ಖಾಸಗಿ ಬಸ್ ಸೇರಿದಂತೆ ಅವಳಿ ನಗರದ ಬಿಆರ್ಟಿಎಸ್ ಬಸ್ಗಳ ಸಂಚಾರ ಸಂಪೂರ್ಣ ಬಂದ್ ಆಗಿದೆ. ಜನರು ಮನೆಯಿಂದ ಹೊರ ಬರಲು ಹಿಂದೇಟು ಹಾಕುತ್ತಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಮನೆ ಮನೆಗೆ ತೆರಳಿ ಆರೋಗ್ಯ ಇಲಾಖೆ ಸರ್ವೆ ಕಾರ್ಯ ನಡೆಸುತ್ತಿದೆ. ಸೋಂಕು ಪತ್ತೆಯಾದ ವ್ಯಕ್ತಿ ಮನೆಯಿಂದ ಸುಮಾರು 3 ಕಿಲೋ ಮೀಟರ್ ಪ್ರದೇಶಗಳನ್ನು ಕಂಟೇನ್ಮೆಂಟ್ (ನಿರ್ಬಂಧಿತ ವಲಯ) ಎಂದು ಘೋಷಣೆ ಮಾಡಲಾಗಿದೆ. ಹಾಲು, ತರಕಾರಿ, ದಿನಸಿ ಆಹಾರದ ಅಗತ್ಯ ವಸ್ತುಗಳ ಪೂರೈಕೆ ಎಂದಿನಂತೆ ಶುರುವಾಗಿದೆ.