ಕರ್ನಾಟಕ

karnataka

ETV Bharat / city

ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ: ವಿದ್ಯುತ್ ತಂತಿ ತಗುಲಿ ಹಸು ಸಾವು

ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ ದಿಂದ ಹುಬ್ಬಳ್ಳಿಯ ಮ್ಯಾದಾರ ಓಣಿಯಲ್ಲಿ ಹಲವು ದಿನಗಳ ಹಿಂದೆಯೇ ರಸ್ತೆಯಲ್ಲಿ ವಿದ್ಯುತ್ ತಂತಿ ಹರಿದು ಬಿದ್ದಿದ್ದು, ಪರಿಣಾಮ ಹಸುವೊಂದು ಸಾವನ್ನಪ್ಪಿದೆ.

By

Published : Jun 21, 2019, 9:37 AM IST

ವಿದ್ಯುತ್ ತಂತಿ ತಗುಲಿ ಹಸು ಸಾವು

ಹುಬ್ಬಳ್ಳಿ: ವಿದ್ಯುತ್ ತಂತಿ ತಗುಲಿ ಹಸು ಸಾವಿಗೀಡಾದ ಘಟನೆ ಹುಬ್ಬಳ್ಳಿಯ ಮ್ಯಾದಾರ ಓಣಿಯಲ್ಲಿ ನಡೆದಿದೆ.

ವಿದ್ಯುತ್ ತಂತಿ ತಗುಲಿ ಹಸು ಸಾವು

ಹಲವು ದಿನಗಳ ಹಿಂದೆಯೇ ರಸ್ತೆಯಲ್ಲಿ ವಿದ್ಯುತ್ ತಂತಿ ಹರಿದು ಬಿದ್ದಿತ್ತು. ಈ ಕುರಿತು ಸಾರ್ವಜನಿಕರು ಹೆಸ್ಕಾಂ ಅಧಿಕಾರಿಗಳಿಗೆ ಅನೇಕ ಬಾರಿ ಮಾಹಿತಿ ನೀಡಿದರೂ ಅಧಿಕಾರಿಗಳು ತಲೆ ಕೆಡಿಸಿಕೊಂಡಿರಲಿಲ್ಲ. ಅಷ್ಟೇ ಅಲ್ಲದೆ ಹಿಂದೆಯೂ ಕೂಡ ಹಲವು ಸಾರಿ ಇದೇ ರೀತಿ ನಾಯಿಗಳು ಸಹ ತಂತಿ ತಗುಲಿ ಸಾವನ್ನಪ್ಪಿದ್ದು , ಹೆಸ್ಕಾಂ ಹಾಗೂ ಮಹಾನಗರ ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಹಸು ಸಾವಿಗೆ ಕಾರಣ ಎಂದು ಸಾರ್ವಜನಿಕರು ಆರೋಪಿಸಿದರು.

ಇನ್ನಾದರೂ ಹೆಸ್ಕಾಂ ಅಧಿಕಾರಿಗಳು ಈ ಕುರಿತು ಸೂಕ್ತ ಕ್ರಮ ಕೈಗೊಳ್ಳಲ್ಲಿ ಎನ್ನುವುದು ಸಾರ್ವಜನಿಕರ ಆಶಯ.

For All Latest Updates

TAGGED:

ABOUT THE AUTHOR

...view details