ಕರ್ನಾಟಕ

karnataka

By

Published : Dec 9, 2021, 11:54 AM IST

ETV Bharat / city

ಹುಬ್ಬಳ್ಳಿ ತ್ರಿವಳಿ ಕೊಲೆ ಪ್ರಕರಣ: ಸಿಆರ್​ಪಿಎಫ್ ಯೋಧನಿಗೆ ಜೀವಾವಧಿ ಶಿಕ್ಷೆ

ಒಂದೇ ಕುಟುಂಬದ ಮೂವರನ್ನು ಗುಂಡಿಟ್ಟು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಆರ್​ಪಿಎಫ್ ಯೋಧನಿಗೆ ಜೀವಾವಧಿ ಶಿಕ್ಷೆ ಹಾಗೂ 2.20 ಲಕ್ಷ ರೂ. ದಂಡ ವಿಧಿಸಿ ಒಂದನೇ ಅಧಿಕ ಮತ್ತು ಜಿಲ್ಲಾ ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.

Murder case
ಹುಬ್ಬಳ್ಳಿ ಶೂಟೌಟ್ ಪ್ರಕರಣ

ಹುಬ್ಬಳ್ಳಿ: 11 ವರ್ಷಗಳ ಹಿಂದೆ ನಡೆದ ತ್ರಿವಳಿ ಕೊಲೆ ಪ್ರಕರಣದ ಅಪರಾಧಿ (ಸಿಆರ್​ಪಿಎಫ್ ಯೋಧ) ಶಂಕ್ರಪ್ಪ ತಿಪ್ಪಣ್ಣ ಕೊರವರಗೆ ಜೀವಾವಧಿ ಶಿಕ್ಷೆ ಹಾಗೂ 2.20 ಲಕ್ಷ ರೂ. ದಂಡ ವಿಧಿಸಿ ಒಂದನೇ ಅಧಿಕ ಮತ್ತು ಜಿಲ್ಲಾ ಸತ್ರ ನ್ಯಾಯಾಲಯ ಆದೇಶಿಸಿದೆ.

ಕುಂದಗೋಳ ತಾಲೂಕಿನ ಬೆಟದೂರ ಗ್ರಾಮದ ಒಂದೇ ಕುಟುಂಬದ ಮೂವರನ್ನು ಗುಂಡಿಟ್ಟು ಹತ್ಯೆಗೈದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಅಪರಾಧಿಗೆ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ. 2010ರಲ್ಲಿ ಮದುವೆಯಾಗಿದ್ದ ಶಂಕ್ರಪ್ಪ ತಿಪ್ಪಣ್ಣ ಮತ್ತು ಪತ್ನಿ ನಡುವೆ ಜಗಳ ನಡೆದಿದ್ದು, ಹೆಂಡತಿ ತವರು ಸೇರಿದ್ದಳು.

ಸಂಬಂಧಿಕರಾದ ಯಲ್ಲಪ್ಪ ಭಜಂತ್ರಿ, ಪತ್ನಿ ಜಗಳ ಮಾಡಿ ತವರು ಸೇರಲು ಕಾರಣ ಎಂದು ಭಾವಿಸಿದ ಯೋಧ, ತಾಯಿಯ ಆಸ್ತಿಯನ್ನು ತನ್ನ ಹೆಸರಿಗೆ ಬರುವಂತೆ ಮಾಡಲು ಸಂಬಂಧಿಗಳು ಸಹಕರಿಸಲಿಲ್ಲ ಎಂಬ ದ್ವೇಷದಿಂದ ಬೆಟದೂರು ಗ್ರಾಮದ ಯಲ್ಲಪ್ಪ ಭಜಂತ್ರಿ (38), ಸೋಮಪ್ಪ ಭಜಂತ್ರಿ (11), ಐಶ್ವರ್ಯ ಭಜಂತ್ರಿ (9)ಗೆ ಬಂದೂಕಿನಿಂದ ಗಂಡು ಹಾರಿಸಿ ಹತ್ಯೆ ಮಾಡಿ ಮದನಕುಮಾರ ಎಂಬಾತನನ್ನು ಗಾಯಗೊಳಿಸಿದ್ದ. ಈ ವೇಳೆ ಯಲ್ಲಪ್ಪನ ಹೆಂಡತಿ ಗೀತಾ ಗುಂಡೇಟಿನಿಂದ ಪಾರಾಗಿದ್ದಳು.

ಈ ಕುರಿತು ಕುಂದಗೋಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ 1ನೇ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶ ದೇವಂದ್ರಪ್ಪ ಎನ್. ಬಿರಾದಾರ ಅಪರಾಧಿಗೆ 24 ವರ್ಷ ಕಠಿಣ ಜೀವಾವಧಿ ಶಿಕ್ಷೆ ಹಾಗೂ 2.20 ಲಕ್ಷ ರೂ. ದಂಡ ವಿಧಿಸಿ ಆದೇಶ ನೀಡಿದ್ದಾರೆ.

ABOUT THE AUTHOR

...view details