ಕರ್ನಾಟಕ

karnataka

ETV Bharat / city

ಧಾರವಾಡ: ಉತಾರ ನೀಡಲು ಲಂಚಕ್ಕೆ ಬೇಡಿಕೆ; ಎಸಿಬಿ ಬಲೆಗೆ ಬಿದ್ದ ಎಸ್​ಡಿಎ

ಲಂಚಕ್ಕೆ ಬೇಡಿಕೆಯಿಟ್ಟಿದ್ದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಎಸ್​​ಡಿಎ ಅಧಿಕಾರಿಯನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.

By

Published : Aug 7, 2022, 10:50 AM IST

Hubli
ಸಾಂದರ್ಭಿಕ ಚಿತ್ರ

ಧಾರವಾಡ: ಉತಾರ(ಭೂ ದಾಖಲೆ ಪತ್ರ) ನೀಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಪಾಲಿಕೆ ಅಧಿಕಾರಿಯೋರ್ವನನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಎಸ್​​ಡಿಎ(ದ್ವಿತೀಯ ದರ್ಜೆ ಸಹಾಯಕ) ವೆಂಕಟೇಶ ದಾಸರ ಬಂಧಿತ ಆರೋಪಿ. ಇವರು ನೀರಿನ ಪೈಪ್‌ಲೈನ್​​ಗಾಗಿ ಉತಾರ ಕೇಳಲು ಬಂದಿದ್ದ ವ್ಯಕ್ತಿಯ ಬಳಿ 6 ಸಾವಿರ ರೂ. ಬೇಡಿಕೆ ಇಟ್ಟಿದ್ದರಂತೆ. ಈ ಹಿನ್ನೆಲೆಯಲ್ಲಿ ಧಾರವಾಡದ ವ್ಯಕ್ತಿ ಎಸಿಬಿಗೆ ದೂರು ನೀಡಿದ್ದರು. ವಿಷಯ ತಿಳಿದು ಕಾರ್ಯಪ್ರವೃತ್ತರಾದ ಅಧಿಕಾರಗಳು ಹಣ ಪಡೆಯುವಾಗ ದಾಳಿ ನಡೆಸಿದ್ದಾರೆ.

ABOUT THE AUTHOR

...view details