ಕರ್ನಾಟಕ

karnataka

ETV Bharat / city

ಯಾರ ಮನೆ ಬಾಗಿಲಿಗೆ ಹೋದರೂ ಟಿಕೆಟ್ ಸಿಗಲ್ಲ: ಮಾಜಿ ಸಿಎಂ ಜಗದೀಶ್ ಶೆಟ್ಟರ್ - ಮಹಾನಗರ ಪಾಲಿಕೆ ಚುನಾವಣೆ

ಮಹಾನಗರ ಪಾಲಿಕೆ ಚುನಾವಣೆ ಸಂಬಂಧ, ಟಿಕೆಟ್ ಪಡೆಯಲು ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳ ದಂಡು ನಾಯಕರ ಮನೆ ಬಾಗಿಲಿಗೆ ಬರುತ್ತಿದೆ‌.‌ ಆದರೆ ಯಾರ ಮನೆ ಬಾಗಿಲಿಗೆ ಹೋದರೂ ಟಿಕೆಟ್ ಸಿಗುವುದಿಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.

jagadeesh shettar
ಮಾಜಿ ಸಿಎಂ ಜಗದೀಶ್ ಶೆಟ್ಟರ್

By

Published : Aug 17, 2021, 7:49 PM IST

ಹುಬ್ಬಳ್ಳಿ:ಮಹಾನಗರ ಪಾಲಿಕೆ ಚುನಾವಣೆಗೆ ಸ್ಪರ್ಧಿಸುವ ಬಿಜೆಪಿ ಅಭ್ಯರ್ಥಿಗಳು ಯಾರ ಮನೆಗೆ ಹೋದರೂ ಟಿಕೆಟ್ ಸಿಗುವುದಿಲ್ಲ. ಅದನ್ನು ಕೋರ್ ಕಮಿಟಿಯೇ ನಿರ್ಧಾರ ಮಾಡುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು.

ಮಾಜಿ ಸಿಎಂ ಜಗದೀಶ್ ಶೆಟ್ಟರ್

ನಗರದಲ್ಲಿಂದು ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಟಿಕೆಟ್ ಪಡೆಯಲು ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳ ದಂಡು ನಾಯಕರ ಮನೆ ಬಾಗಿಲಿಗೆ ಬರುತ್ತಿದೆ‌.‌ ಆದರೆ ಯಾರ ಮನೆ ಬಾಗಿಲಿಗೆ ಹೋದರೂ ಟಿಕೆಟ್ ಸಿಗುವುದಿಲ್ಲ. ಅದು ಯಾರ ಕೈಯಲ್ಲೂ ಇಲ್ಲ. ಟಿಕೆಟ್ ಹಂಚಿಕೆ ಕೋರ್ ಕಮಿಟಿಗೆ ಬಿಟ್ಟದ್ದು ಎಂದು ಸ್ಪಷ್ಟಪಡಿಸಿದರು.

ಪ್ರಬಲ ಅಭ್ಯರ್ಥಿ ಹಾಗೂ ಯಾರಿಗೆ ನಾಯಕತ್ವದ ಗುಣ ಇದೆಯೋ ಅವರನ್ನು ಆಯ್ಕೆ ಮಾಡಿ ಟಿಕೆಟ್ ನೀಡುವ ಕಾರ್ಯವನ್ನು ಭಾರತೀಯ ಜನತಾ ಪಕ್ಷದ ಮುಖಂಡರು ಮಾಡಲಿದ್ದಾರೆ ಎಂದು ಶೆಟ್ಟರ್​ ತಿಳಿಸಿದರು.

ಇದನ್ನೂ ಓದಿ:ಒಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡಿ ಸರ ಕದಿಯುತ್ತಿದ್ದ ಮೂವರು ಆರೋಪಿಗಳ ಬಂಧನ

ABOUT THE AUTHOR

...view details