ಕರ್ನಾಟಕ

karnataka

ETV Bharat / city

ಸಂಪುಟ ವಿಸ್ತರಣೆ ವೇಳೆ ಅಸಮಾಧಾನಗಳು ಭುಗಿಲೇಳುವುದು ಸಹಜ: ಜಗದೀಶ್ ಶೆಟ್ಟರ್ - ಸಚಿವ ಸಂಪುಟ ವಿಸ್ತರಣೆ

ಸಂಪುಟ ವಿಸ್ತರಣೆ ಮಾಡೋದು ಸಿಎಂ ಪರಮಾಧಿಕಾರ. ಈ ಸಂದರ್ಭ ಅಸಮಾಧಾನಗಳು ಭುಗಿಲೇಳುವುದು ಸಹಜ. ಎಲ್ಲರನ್ನು ಸಮಾಧಾನಪಡಿಸುವ ಕೆಲಸವನ್ನ ಪಕ್ಷದ ವರಿಷ್ಠರು ಮಾಡಲಿದ್ದಾರೆ ಎಂದು ಜಗದೀಶ್ ಶೆಟ್ಟರ್ ಹೇಳಿದರು.

shetter
shetter

By

Published : Jan 14, 2021, 11:53 AM IST

Updated : Jan 14, 2021, 12:23 PM IST

ಹುಬ್ಬಳ್ಳಿ: ಸಚಿವ ಸಂಪುಟ ವಿಸ್ತರಣೆ ವೇಳೆ ಅಸಮಾಧಾನ ವ್ಯಕ್ತವಾಗುವುದು ಸಹಜ. ನಮ್ಮ‌‌ ಪಕ್ಷದ ವರಿಷ್ಠರು ಎಲ್ಲರನ್ನು ಸಮಾಧಾನಪಡಿಸುವ ಕೆಲಸವನ್ನ ಮಾಡಲಿದ್ದಾರೆ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

ನಗರದಲ್ಲಿಂದು ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಮಾಡೋದು ಸಿಎಂ ಪರಮಾಧಿಕಾರ. ಸಂಪುಟ ವಿಸ್ತರಣೆ ಸಂದರ್ಭ ಅಸಮಾಧಾನಗಳು ಭುಗಿಲೇಳುವುದು ಸಹಜ. ಎಲ್ಲರನ್ನೂ ಸಮಾಧಾನಪಡಿಸುವ ಕೆಲಸವನ್ನ ಪಕ್ಷದ ವರಿಷ್ಠರು ಮಾಡಲಿದ್ದಾರೆ ಎಂದರು.

ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ

ಎಚ್.ವಿಶ್ವನಾಥ ಸಿ.ಡಿ. ಬಹಿರಂಗಪಡಿಸುವ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಪಕ್ಷದ ಆಂತರಿಕ ವಿಚಾರಗಳು ಏನೇ ಇದ್ದರೂ, ಅದನ್ನು ಪಕ್ಷದ ವರಿಷ್ಠರ‌‌ ಜೊತೆ ಚರ್ಚೆ ಮಾಡಬೇಕು. ಬಹಿರಂಗವಾಗಿ ಹೇಳಿಕೆಗಳನ್ನು ನೀಡಬಾರದು. ಅಸಮಾಧಾನಗೊಂಡವರಿಗೆ ಪಕ್ಷದ ವರಿಷ್ಠರು ಸೂಕ್ತ ಸ್ಥಾನಮಾನ ನೀಡಲಿದ್ದಾರೆ ಎಂಬ ಭರವಸೆ ಇದೆ‌ ಎಂದರು.

Last Updated : Jan 14, 2021, 12:23 PM IST

ABOUT THE AUTHOR

...view details