ಕರ್ನಾಟಕ

karnataka

ಹುಬ್ಬಳ್ಳಿಯಲ್ಲಿ ಉಗ್ರ ಸ್ವರೂಪ ಪಡೆದ ಕಾನೂನು ವಿದ್ಯಾರ್ಥಿಗಳ ಪ್ರತಿಭಟನೆ : ವಿವಿ ಮುತ್ತಿಗೆಗೆ ಯತ್ನ

By

Published : Dec 9, 2021, 2:34 PM IST

Updated : Dec 9, 2021, 2:40 PM IST

ಕಾನೂನು ವಿದ್ಯಾರ್ಥಿಗಳ ಪ್ರತಿಭಟನೆ ಉಗ್ರಸ್ವರೂಪ ಪಡೆದುಕೊಂಡಿದೆ. ಕಾನೂನು ವಿಶ್ವವಿದ್ಯಾಲಯದ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ವಿದ್ಯಾರ್ಥಿಗಳನ್ನು ಪೊಲೀಸರು ತಡೆಯಲು ಹರಸಾಹಸ ಪಡುವಂತಾಯಿತು. ಈ ವೇಳೆ ಕೆಲಕಾಲ ಗೊಂದಲ ಸೃಷ್ಟಿಯಾಗಿತ್ತು.‌

law-students-protest-in-hubli
ಕಾನೂನು ವಿದ್ಯಾರ್ಥಿಗಳ ಪ್ರತಿಭಟನೆ

ಹುಬ್ಬಳ್ಳಿ :ವಾಣಿಜ್ಯನಗರಿ ಹುಬ್ಬಳ್ಳಿಯ ನವನಗರದ ಕಾನೂನು ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಕಾನೂನು ವಿದ್ಯಾರ್ಥಿಗಳ ಪ್ರತಿಭಟನೆ ಉಗ್ರಸ್ವರೂಪ ಪಡೆದುಕೊಂಡಿದೆ. ಎಬಿವಿಪಿ ನೇತೃತ್ವದಲ್ಲಿ ನಡೆದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳು ಬ್ಯಾರಿಕೇಡ್ ಹಾಗೂ ವಿಶ್ವವಿದ್ಯಾಲಯ ಗೇಟ್ ತಳ್ಳಿ ಮುತ್ತಿಗೆ ಹಾಕಲು ಯತ್ನಿಸಿದರು.

ಉಗ್ರ ಸ್ವರೂಪ ಪಡೆದ ಕಾನೂನು ವಿದ್ಯಾರ್ಥಿಗಳ ಪ್ರತಿಭಟನೆ

ವಿದ್ಯಾರ್ಥಿಗಳು ವಿಶ್ವವಿದ್ಯಾಲಯಕ್ಕೆ ಮುತ್ತಿಗೆ ಹಾಕುವ ಸಂದರ್ಭದಲ್ಲಿ ಪೊಲೀಸರ ಹಾಗೂ ವಿದ್ಯಾರ್ಥಿಗಳ ಮಧ್ಯದಲ್ಲಿ ತಳ್ಳಾಟ ನೂಕಾಟ ನಡೆದು ಪರಿಸ್ಥಿತಿ‌ ವಿಕೋಪಕ್ಕೆ ತಿರುಗುವ ಹಂತಕ್ಕೆ ತಲುಪಿತ್ತು. ಕಾನೂನು ವಿವಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ವಿದ್ಯಾರ್ಥಿಗಳನ್ನು ಪೊಲೀಸರು ತಡೆಯಲು ಹರಸಾಹಸ ಪಡುವಂತಾಯಿತು. ಈ ವೇಳೆ ಕೆಲಕಾಲ ಗೊಂದಲ ಸೃಷ್ಟಿಯಾಗಿತ್ತು.‌

ಪೊಲೀಸರು ಕೂಡ ವಿದ್ಯಾರ್ಥಿಗಳನ್ನು ಮನವೊಲಿಸಿ ಶಾಂತ ರೀತಿ‌ಯಿಂದ ಪ್ರತಿಭಟನೆ ಮಾಡಲು ಸೂಚಿಸಿದ್ದು, ಈಗ ಪರಿಸ್ಥಿತಿ ಶಾಂತವಾಗಿದೆ. ತಳ್ಳಾಟ ನೂಕಾಟದಲ್ಲಿ ನಾಲ್ಕೈದು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮುಂಜಾಗ್ರತ ಕ್ರಮವಾಗಿ‌ ಪೊಲೀಸರು ವಿವಿಗೆ ಹೆಚ್ಚಿನ ಭದ್ರತೆ ಒದಗಿಸಿದ್ದಾರೆ.

Last Updated : Dec 9, 2021, 2:40 PM IST

ABOUT THE AUTHOR

...view details