ಕರ್ನಾಟಕ

karnataka

ETV Bharat / city

ಲಾಕ್​ಡೌನ್​​​ನಲ್ಲಿ ಕಾರ್ಮಿಕರ ಕೈ ಹಿಡಿದ ಉದ್ಯೋಗ ಖಾತ್ರಿ ಯೋಜನೆ

ಲಾಕ್​ಡೌನ್ ಜಾರಿಯಾದಾಗಿನಿಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜನರಿಗೆ ಕೆಲಸವಿಲ್ಲದೆ ಮನೆಯಲ್ಲಿಯೇ ಕಾಲ ಕಳೆಯುವಂತಾಗಿತ್ತು. ಆದರೆ ಇಲ್ಲಿನ ಕಲಘಟಗಿ ತಾಲೂಕಿನ ಜಿ. ಬಸವನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನೀಡಲಾಗುತ್ತಿದೆ. ಈ ಮೂಲಕ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಜನತೆಗೆ ಉದ್ಯೋಗದ ಭರವಸೆ ನೀಡಿದ್ದಲ್ಲದೆ ಗರಿಷ್ಟ ವೇತನ ನೀಡಲಾಗುತ್ತಿದೆ.

By

Published : May 6, 2020, 6:27 PM IST

NAREGA scheme helped to poor families in Hubbali
ಲಾಕ್​ಡೌನ್​​​ನಲ್ಲಿ ಕಾರ್ಮಿಕರ ಕೈ ಹಿಡಿದ ಉದ್ಯೋಗ ಖಾತ್ರಿ ಯೋಜನೆ

ಹುಬ್ಬಳ್ಳಿ: ಇಲ್ಲಿನ ಕಲಘಟಗಿ ತಾಲೂಕಿನ ಜಿ. ಬಸವನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಗೌನ ಕೆರೆಯಲ್ಲಿ ಹೂಳೆತ್ತುವ ಕಾಮಗಾರಿ ಪ್ರಾರಂಭಿಸಲಾಯಿತು.

ಸುಮಾರು 2,95,000 ರೂ. ವೆಚ್ಚದಲ್ಲಿ ಈ ಕಾಮಗಾರಿ ಕೈಗೊಳ್ಳಲಾಗಿದೆ. 20ಕ್ಕೂ ಹೆಚ್ಚು ಕೂಲಿಕಾರರು ಕೆಲಸ ಮಾಡುತ್ತಿದ್ದಾರೆ. ಸಾಮಾಜಿಕ ಅಂತರ ಕಾಯ್ದುಕೊಂಡು ಕೆಲಸ ನಿರ್ವಹಿಸಲಾಗುತ್ತಿದೆ.

ಈ ವೇಳೆ ಆಗಮಿಸಿದ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿಗಳು ಕೋವಿಡ್-19 ಜಾಗೃತಿಯ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದರು. ಕೂಲಿಕಾರ್ಮಿಕರಿಗೆ ಮಹಾತ್ಮ ಗಾಂಧಿ ನರೇಗಾ ಯೋಜನೆಯ ಕಾಯಕ ಮಿತ್ರ ಆ್ಯಪ್ ಹಾಗೂ ಕೋವಿಡ್ -19 ಪಂಚ ಸೂತ್ರಗಳನ್ನು ವಿವರಿಸಿದರು.

ಗ್ರಾಮದ ತಿಪ್ಪಣ್ಣ ಪಲ್ಲೇದ್ ಹೊಲದಲ್ಲಿ 25 ಸಾವಿರ ರೂ. ವೆಚ್ಚದಲ್ಲಿ ಬದು ನಿರ್ಮಾಣ ಕಾರ್ಯ ಕೈಗೊಳ್ಳಲಾಗಿದ್ದು, ಮಳೆ ನೀರು ಇಂಗಿಸಲು ಹಾಗೂ ಮಣ್ಣಿನ ಫಲವತ್ತತೆ ಹೆಚ್ಚಿಸಲು ಬದು ನಿರ್ಮಾಣ ಅತ್ಯಗತ್ಯ ಎಂದು ರೈತರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ABOUT THE AUTHOR

...view details