ಕರ್ನಾಟಕ

karnataka

ETV Bharat / city

ಈಟಿವಿ ಭಾರತ ಫಲಶ್ರುತಿ: ಹುಬ್ಬಳ್ಳಿಯಲ್ಲಿ ಪಿಒಪಿ ಗಣೇಶ ಮೂರ್ತಿಗಳಿಗೆ ಬ್ರೇಕ್​​​​​​ - ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳು

ಈಟಿವಿ ಭಾರತ ವರದಿಯಿಂದ ಎತ್ತೆಚ್ಚುಕೊಂಡ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳು ಕೊನೆಗೂ ಅಕ್ರಮವಾಗಿ ಸಂಗ್ರಹಿಸಿದ್ದ ಹಾಗೂ ತಯಾರಿಸುತ್ತಿದ್ದ ಪಿಒಪಿ ಗಣೇಶ ಮೂರ್ತಿಗಳನ್ನು ವಶಕ್ಕೆ ಪಡೆದಿದ್ದಾರೆ.

ಹುಬ್ಬಳ್ಳಿಯಲ್ಲಿ ಪಿಒಪಿ ಗಣೇಶ ಮೂರ್ತಿಗಳು ವಶಕ್ಕೆ

By

Published : Aug 5, 2019, 1:38 PM IST

ಹುಬ್ಬಳ್ಳಿ:ನಗರದಲ್ಲಿ ಪಿಒಪಿ ಗಣೇಶ ಮೂರ್ತಿ ತಯಾರಿಕಾ ಘಟಕಗಳ ಮೇಲೆ ಮಹಾನಗರ ಪಾಲಿಕೆ ಪರಿಸರ ಸಂರಕ್ಷಣಾಧಿಕಾರಿಗಳು ದಾಳಿ ನಡೆಸಿ, ಪಿಒಪಿ ಗಣೇಶ ಮೂರ್ತಿಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಮೂಲಕ ಈಟಿವಿ ಭಾರತ ವರದಿಗೆ ಫಲ ಸಿಕ್ಕಿದೆ.

ಆ. 2 ರಂದು 'ಹುಬ್ಬಳ್ಳಿಯಲ್ಲಿ ಪಿಒಪಿ ಗಣೇಶ ಮೂರ್ತಿ ತಯಾರಿಕೆ: ಸಾರ್ವಜನಿಕರ ಆಕ್ರೋಶ' ಎಂಬ ವರದಿಯನ್ನು ಈಟಿವಿ ಭಾರತ ಪ್ರಕಟಿಸಿತ್ತು. ಇದರಿಂದ ಎತ್ತೆಚ್ಚುಕೊಂಡ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳು ಕೊನೆಗೂ ಅಕ್ರಮವಾಗಿ ಸಂಗ್ರಹಿಸಿದ್ದ ಹಾಗೂ ತಯಾರಿಸುತ್ತಿದ್ದ ಪಿಒಪಿ ಗಣೇಶ ಮೂರ್ತಿಗಳನ್ನು ವಶಕ್ಕೆ ಪಡೆದಿದ್ದಾರೆ.

ಹುಬ್ಬಳ್ಳಿಯಲ್ಲಿ ಪಿಒಪಿ ಗಣೇಶ ಮೂರ್ತಿ ತಯಾರಿಕೆ: ಸಾರ್ವಜನಿಕರ ಆಕ್ರೋಶ

ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆ ಪಿಒಪಿ ಗಣೇಶ ಮೂರ್ತಿ ತಯಾರಿಕೆಗೆ ಕಡಿವಾಣ ಹಾಕಿದ್ದರೂ ಕೂಡ ನಗರದ ಹೊರವಲಯದ ಗಬ್ಬೂರು ಬೈಪಾಸ್ ಬಳಿ ರಾಜಾರೋಷವಾಗಿ ಗಣೇಶ ಮೂರ್ತಿ ತಯಾರಿಸಲಾಗುತ್ತಿತ್ತು. ಇನ್ನು ಕೆಲವು ಕಡೆ ಅನ್ಯ ರಾಜ್ಯ ಹಾಗೂ ಜಿಲ್ಲೆಗಳಲ್ಲಿ ತಯಾರಿಸುವ ಪಿಒಪಿ ಮೂರ್ತಿಗಳನ್ನು ತರಿಸಿಕೊಂಡು ಸಂಗ್ರಹಿಸಿಡಲಾಗುತ್ತಿತ್ತು. ಇದೀಗ ಈಟಿವಿ ಭಾರತ ವರದಿ ಫಲಶೃತಿಯಿಂದ ಹು-ಧಾ ಮಹಾನಗರದಲ್ಲಿ ಪರಿಸರ ಸಂರಕ್ಷಣೆ ಅಧಿಕಾರಿಗಳು ಕೊನೆಗೂ ಇದಕ್ಕೆ ಬ್ರೇಕ್ ಹಾಕುತ್ತಿದ್ದಾರೆ.

ABOUT THE AUTHOR

...view details