ಧಾರವಾಡ: ಬೆಳಗಾವಿಯ ಪೀರನವಾಡಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ತೆರವಿಗೆ ಶ್ರೀರಾಮಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಿರೋಧ ವ್ಯಕ್ತಪಡಿಸಿದ್ದಾರೆ.
ಪೀರನವಾಡಿಯಲ್ಲಿ ರಾಯಣ್ಣ ಪ್ರತಿಮೆ ತೆರವು, ಮುತಾಲಿಕ್ ವಿರೋಧ
ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ದೇಶಪ್ರೇಮಿ ಸಂಗೊಳ್ಳಿ ರಾಯಣ್ಣನನ್ನು ಜಾತಿ, ಭಾಷೆಯ ಲೆಕ್ಕಾಚಾರದಲ್ಲಿ ನೋಡುವ ವಿಚಾರಕ್ಕೆ ಸಂಬಂಧಿಸಿದಂತೆ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪೀರನವಾಡಿಯಲ್ಲಿ ರಾಯಣ್ಣ ಪ್ರತಿಮೆ ದ್ವಂಸಕ್ಕೆ ಪ್ರಮೋದ್ ಮುತಾಲಿಕ್ ವಿರೋಧ
ಈ ಕುರಿತು ತಮ್ಮ ನಿವಾಸದಲ್ಲಿ ಮಾತನಾಡಿರುವ ಅವರು, ಸಂಗೊಳ್ಳಿ ರಾಯಣ್ಣ ಜಾತಿ, ಭಾಷೆ ಮೀರಿ ಬೆಳೆದ ಅಪ್ಪಟ ಸ್ವಾತಂತ್ರ್ಯ ಹೋರಾಟಗಾರ. ಆತನ ಪ್ರತಿಮೆ ತೆರವುಗೊಳಿಸಿ ಅಧಿಕಾರಿಗಳು ಅಕ್ಷಮ್ಯ ಅಪರಾಧ ಎಸಗಿದ್ದಾರೆ ಎಂದರು.
ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ದೇಶಪ್ರೇಮಿ ಸಂಗೊಳ್ಳಿ ರಾಯಣ್ಣನೆಂಬ ಮಹಾಪುರುಷರನ್ನು ಜಾತಿ, ಭಾಷೆ ಲೆಕ್ಕಾಚಾರ ಮಾಡುವವರ ವಿರುದ್ಧ ಅವರು ಕಿಡಿ ಕಾರಿದರು. ಜೊತೆಗೆ ರಾಜ್ಯದ ಮೂಲೆ ಮೂಲೆಗಳಲ್ಲಿ ರಾಯಣ್ಣ ಮೂರ್ತಿ ಸ್ಥಾಪನೆಗೆ ಶ್ರೀರಾಮಸೇನೆಯನ್ನು ಆಗ್ರಹಿಸಿದ್ದಾರೆ.
Last Updated : Aug 28, 2020, 4:30 PM IST