ಹುಬ್ಬಳ್ಳಿ: ನೇರ ನೇಮಕಾತಿ, ನೇರ ವೇತನ ಪಾವತಿ ಹಾಗೂ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಧಾರವಾಡ ಜಿಲ್ಲಾ ಎಸ್.ಸಿ, ಎಸ್.ಟಿ ಪೌರಕಾರ್ಮಿಕರ - ನೌಕರರ ಸಂಘಟನೆಯ ವತಿಯಿಂದ ಬೂಟ್ ಪಾಲಿಶ್ ಮಾಡುವ ಮೂಲಕ ಮಹಾನಗರ ಪಾಲಿಕೆ ವಿರುದ್ಧ ಪ್ರತಿಭಟನೆ ನಡೆಸಿದರು.
ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯ: ಬೂಟ್ ಪಾಲಿಶ್ ಮಾಡೋ ಮೂಲಕ ಪ್ರತಿಭಟನೆ - hubli protest news
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಧಾರವಾಡ ಜಿಲ್ಲಾ ಎಸ್.ಸಿ, ಎಸ್.ಟಿ ಪೌರಕಾರ್ಮಿಕರ - ನೌಕರರ ಸಂಘಟನೆಯಿಂದ ಬೂಟ್ ಪಾಲಿಶ್ ಮಾಡುವ ಮೂಲಕ ಮಹಾನಗರ ಪಾಲಿಕೆ ವಿರುದ್ಧ ವಿನೂತನವಾಗಿ ಪ್ರತಿಭಟನೆ ನಡೆಸಿದರು.
![ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯ: ಬೂಟ್ ಪಾಲಿಶ್ ಮಾಡೋ ಮೂಲಕ ಪ್ರತಿಭಟನೆ hubli](https://etvbharatimages.akamaized.net/etvbharat/prod-images/768-512-9098699-236-9098699-1602156535984.jpg)
ಬೂಟ್ ಪಾಲಿಶ್ ಮಾಡುವ ಮೂಲಕ ಪ್ರತಿಭಟನೆ
ಎಸ್.ಸಿ, ಎಸ್.ಟಿ ಪೌರಕಾರ್ಮಿಕರ-ನೌಕರರ ಸಂಘಟನೆಯ ವತಿಯಿಂದ ಬೂಟ್ ಪಾಲಿಶ್ ಮಾಡುವ ಮೂಲ ಪ್ರತಿಭಟನೆ ನಡೆಸಲಾಯಿತು.
ಸುಮಾರು ವರ್ಷಗಳಿಂದ ಬೇಡಿಕೆ ಈಡೇರಿಸುವಂತೆ ಮನವಿ ಮಾಡಿದರು ಕೂಡ ಹು - ಧಾ ಮಹಾನಗರ ಪಾಲಿಕೆ ಅಧಿಕಾರಿಗಳು ಹಾಗೂ ಸರ್ಕಾರ ಯಾವುದೇ ಸೂಕ್ತ ಕ್ರಮಗಳನ್ನು ಜಾರಿಗೊಳಿಸುತ್ತಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಅಲ್ಲದೇ ಪೌರಕಾರ್ಮಿಕರು ಸಾಕಷ್ಟು ಸಂಕಷ್ಟಕ್ಕೆ ಸಿಲುಕಿದ್ದು, ಕೂಡಲೇ ಧಾರವಾಡ ಜಿಲ್ಲಾ ಎಸ್.ಸಿ, ಎಸ್.ಟಿ ಪೌರಕಾರ್ಮಿಕರ - ನೌಕರರ ಬೇಡಿಕೆ ಈಡೇರಿಸಬೇಕು ಎಂದು ಘೋಷಣೆ ಕೂಗಿ ಬೂಟ್ ಪಾಲಿಶ್ ಮಾಡಿ ಸರ್ಕಾರ ಮತ್ತು ಮಹಾನಗರ ಪಾಲಿಕೆ ವಿರುದ್ಧ ಘೋಷಣೆ ಕೂಗಿದರು.