ಕರ್ನಾಟಕ

karnataka

By

Published : Mar 18, 2021, 7:01 PM IST

ETV Bharat / city

ಮಹಾನಗರ ಪಾಲಿಕೆಯಿಂದ ಅತಿಕ್ರಮಣ ಫುಟ್​​ಪಾತ್​​ ತೆರವು

ಹುಬ್ಬಳ್ಳಿಯ ಕೊಪ್ಪಿಕರ ರಸ್ತೆ ಸೇರಿದಂತೆ ಬಹುತೇಕ ಕಡೆಗಳಲ್ಲಿ ಫುಟ್​​ಪಾತ್ ಅತಿಕ್ರಮಣ ಮಾಡಿದ್ದ ಅಂಗಡಿಗಳು ಹಾಗೂ ಅನಧಿಕೃತ ನಾಮಫಲಕಗಳಿಂದ ಸಾರ್ವಜನಿಕರಿಗೆ ಹಾಗೂ ಅವಳಿನಗರದ ಸೌಂದರ್ಯಕ್ಕೆ ಧಕ್ಕೆಯುಂಟಾದ ಬೆನ್ನಲ್ಲೇ ತೆರವು ಕಾರ್ಯಾಚರಣೆ ನಡೆಸಲಾಯಿತು.

Breaking News

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯ ಸೌಂದರ್ಯಕ್ಕೆ ಧಕ್ಕೆಯನ್ನುಂಟು ಮಾಡುವ ಅನಧಿಕೃತ ನಾಮಫಲಕಗಳು ಹಾಗೂ ಫುಟ್​ಪಾತ್ ಅತಿಕ್ರಮಣ ಮಾಡಿದ್ದ ಅಂಗಡಿಗಳನ್ನು ಹು-ಧಾ ಮಹಾನಗರ ಪಾಲಿಕೆ ಆಯುಕ್ತ ಸುರೇಶ ಇಟ್ನಾಳ ನೇತೃತ್ವದಲ್ಲಿ ತೆರವು ಮಾಡಲಾಯಿತು.

ಮಹಾನಗರ ಪಾಲಿಕೆಯಿಂದ ಅತಿಕ್ರಮಣ ಫುಟ್​​ಪಾತ್ ತೆರವು

ಹುಬ್ಬಳ್ಳಿಯ ಕೊಪ್ಪಿಕರ ರಸ್ತೆ ಸೇರಿದಂತೆ ಬಹುತೇಕ ಕಡೆಗಳಲ್ಲಿ ಫುಟ್​​ಪಾತ್ ಅತಿಕ್ರಮಣ ಮಾಡಿದ್ದ ಅಂಗಡಿಗಳು ಹಾಗೂ ಅನಧಿಕೃತ ನಾಮಫಲಕಗಳಿಂದ ಸಾರ್ವಜನಿಕರಿಗೆ ಹಾಗೂ ಅವಳಿನಗರದ ಸೌಂದರ್ಯಕ್ಕೆ ಧಕ್ಕೆಯುಂಟಾದ ಬೆನ್ನಲ್ಲೇ ತೆರವು ಕಾರ್ಯಾಚರಣೆ ನಡೆಸಲಾಯಿತು.

ಈ ಹಿಂದೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ನೇತೃತ್ವದಲ್ಲಿ ದಾಜೀಬಾನ ಪೇಟೆ, ದುರ್ಗದ ಬೈಲ್ ಸೇರಿದಂತೆ ವಿವಿಧ ಕಡೆಗಳಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು. ಈ ನಿಟ್ಟಿನಲ್ಲಿ ಕಾರ್ಯಾಚರಣೆ ಮತ್ತಷ್ಟು ಚುರುಕುಗೊಳಿಸಿದ ಮಹಾನಗರ ಪಾಲಿಕೆ ಅಧಿಕಾರಿಗಳು ಅತಿಕ್ರಮಣ ಮಾಡಿದವರಿಗೆ ಬಿಸಿ ಮುಟ್ಟಿಸಿದ್ದಾರೆ.

ABOUT THE AUTHOR

...view details