ಹುಬ್ಬಳ್ಳಿ: ಕಳೆದ ಕೆಲ ದಿನಗಳಿಂದ ಸರ್ವರ್ ಸಮಸ್ಯೆಯಿಂದಾಗಿ ಪಡಿತರ ಅಕ್ಕಿ ಪಡೆದುಕೊಳ್ಳಲು ಸಾರ್ವಜನಿಕರು ಹೋರಾಟ ಮಾಡುವಂತಹ ಸ್ಥಿತಿ ನಿರ್ಮಾಣವಾಗಿದೆ.
ಸರ್ವರ್ ಸಮಸ್ಯೆ: ಪಡಿತರ ಪಡೆಯಲು ಸಾರ್ವಜನಿಕರ ಪರದಾಟ
ಕಳೆದ ಕೆಲ ದಿನಗಳಿಂದ ಸರ್ವರ್ ಸಮಸ್ಯೆಯಿಂದಾಗಿ ಪಡಿತರ ಅಕ್ಕಿಯನ್ನು ಪಡೆದುಕೊಳ್ಳಲು ಸಾರ್ವಜನಿಕರು ಹೋರಾಟ ಮಾಡುವಂತಹ ಸ್ಥಿತಿ ನಿರ್ಮಾಣವಾಗಿದೆ.
ವಾಣಿಜ್ಯನಗರಿ ಹುಬ್ಬಳ್ಳಿಯ ಅಮರಗೋಳದಲ್ಲಿ ಒಂದು ವಾರದಿಂದ ಸರ್ವರ್ ಸಮಸ್ಯೆ ತಲೆದೋರಿದ್ದು, ಪಡಿತರ ಅಕ್ಕಿ ಪಡೆಯಲು ಸುಡು ಬೀಸಿಲಿನಲ್ಲಿಯೇ ಮಹಿಳೆಯರು, ಮಕ್ಕಳು ಹಾಗೂ ವೃದ್ಧರು ಸರದಿಯಲ್ಲಿ ನಿಂತು ಕಾಯುವ ಸ್ಥಿತಿ ನಿರ್ಮಾಣವಾಗಿದೆ. ಅಲ್ಲದೆ ಸರದಿಯಲ್ಲಿ ಬೆಳಿಗ್ಗೆಯಿಂದ ಸಂಜೆಯವರೆಗೆ ಇತರೆ ಕೆಲಸ ಬಿಟ್ಟು ನಿಂತುಕೊಂಡರೂ ಕೂಡ ಪಡಿತರ ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ.
ಈ ಸರ್ವರ್ ಸಮಸ್ಯೆ ಸುಮಾರು ದಿನಗಳಿಂದ ತಲೆದೋರಿದ್ದರೂ ಕೂಡ ಸೂಕ್ತ ಕ್ರಮ ಕೈಗೊಳ್ಳದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆ ಬಗೆಹರಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.