ಧಾರವಾಡ : ಮಹಾದಾಯಿ ಹೋರಾಟಗಾರರ ಮೇಲೆ ದಾಖಲಾಗಿದ್ದ ದೂರನ್ನು ಸರ್ಕಾರ ಮರಳಿ ಪಡೆದಿತ್ತು. ಆದ್ರೆ ಇದೀಗ ಕೆಲ ಹೋರಾಟಗಾರ ರೈತರಿಗೆ ಕೋರ್ಟ್ ಸಮನ್ಸ್ ಬಂದಿದೆ. ಕೇಸ್ ರದ್ದಾದರೂ ಸಮನ್ಸ್ ಹೇಗೆ ಬಂತು ಎಂದು ಶಾಸಕ ಎನ್. ಎಚ್. ಕೋನರೆಡ್ಡಿ ಸರ್ಕಾರವನ್ನು ಪ್ರಶ್ನಿಸಿದ್ದಾರೆ.
mahadayi river dispute : ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಹಾದಾಯಿ ಹೋರಾಟಗಾರರಿಗೆ ಸಮನ್ಸ್ ಜಾರಿ ವಿಚಾರಕ್ಕೆ ಪ್ರತಿಕ್ರಿಯಿಸಿ, ಮಹಾದಾಯಿಗಾಗಿ ರೈತರು ಹೋರಾಟ ಮಾಡಿದ್ದರು. ಆಗ ಹೋರಾಟಗಾರರ ಮೇಲೆ ಕೇಸು ದಾಖಲಾಗಿದ್ದವು. ಬಳಿಕ ರಾಜ್ಯ ಸರ್ಕಾರ ಕೇಸ್ ವಾಪಸ್ ಪಡೆದಿತ್ತು. ಈ ಬಗ್ಗೆ ಸರ್ಕಾರದಿಂದ ಆದೇಶವೂ ಆಗಿತ್ತು. ಅದನ್ನು ಕೋರ್ಟ್ಗೆ ಸಲ್ಲಿಸಲಾಗಿತ್ತು. ಆದ್ರೆ ಇದೀಗ ಅನೇಕ ರೈತರಿಗೆ ಸಮನ್ಸ್ ಬಂದಿವೆ. ಒಮ್ಮೆ ಕೇಸ್ ಮರಳಿ ಪಡೆದ ಮೇಲೆ ಸಮನ್ಸ್ ಬಂದಿದ್ದು ಹೇಗೆ? ಎಂದರು.