ಕರ್ನಾಟಕ

karnataka

ETV Bharat / city

ಕಾಂಗ್ರೆಸ್ ದಲಿತ ವಿರೋಧಿ ಪಕ್ಷ : ಬಿಜೆಪಿ ಸಮಾವೇಶದಲ್ಲಿ ಗೋವಿಂದ ಕಾರಜೋಳ ಆರೋಪ - undefined

ಕಾಂಗ್ರೆಸ್ ಪಕ್ಷ ದಲಿತ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ವಿರೋಧಿ ಪಕ್ಷವಾಗಿದ್ದು, ಎಲ್ಲರನ್ನೂ ತುಳಿದು ಕಾಂಗ್ರೆಸ್ ನಾಯಕರು ಬೆಳೆದು ನಿಂತಿದ್ದಾರೆ ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಗೋವಿಂದ ಕಾರಜೋಳ ಆರೋಪ

By

Published : Apr 20, 2019, 6:15 AM IST

ಕಲಬುರಗಿ:ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಸೋಲಿಸಿದ್ದು ಕಾಂಗ್ರೆಸ್ ಪಕ್ಷ. ಅದು ದಲಿತ ವಿರೋಧಿ ಪಕ್ಷ. ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು.

ನಗರದ ವೀರಶೈವ ಕಲ್ಯಾಣ ಮಂಟಪದ ಆವರಣದಲ್ಲಿ ಕಲಬುರಗಿ ಲೋಕಸಭಾ ಬಿಜೆಪಿ ಅಭ್ಯರ್ಥಿ, ಡಾ. ಉಮೇಶ್ ಜಾಧವ್ ಬೆಂಬಲಿಸಿ ಬಿಜೆಪಿ ಎಡಗೈ (ಎಸ್​ಸಿ) ಸಮಾವೇಶಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಅಂದಿನ ಪ್ರಧಾನಿ, ಜವಾಹರಲಾಲ್​ ನೆಹರು ಅವರೇ ಅಂಬೇಡ್ಕರ್ ಅವರ ಸೋಲಿಗೆ ಕಾರಣ ಎಂದರು.

ಗೋವಿಂದ ಕಾರಜೋಳ ಆರೋಪ

ಕಾಂಗ್ರೆಸ್ ಪಕ್ಷ ದಲಿತ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ವಿರೋಧಿ ಪಕ್ಷವಾಗಿದ್ದು, ಎಲ್ಲರನ್ನೂ ತುಳಿದು ಕಾಂಗ್ರೆಸ್ ನಾಯಕರು ಬೆಳೆದು ನಿಂತಿದ್ದಾರೆ ಎಂದು ಆರೋಪಿಸಿದರು. ಬಿಜೆಪಿಯವರು ಸಂವಿಧಾನ ವಿರೋಧಿ ಎಂದು ಕಾಂಗ್ರೆಸ್​ನವರು ಆರೋಪಿಸುತ್ತಾರೆ. ನಾವು ಸಂವಿಧಾನ ರಕ್ಷಣೆಯ ಪರವಾಗಿದ್ದೇವೆ ಎಂದರು.

ಮಲ್ಲಿಕಾರ್ಜುನ್ ಖರ್ಗೆ ಹಲವು ಬಾರಿ ಗೆದ್ದು ಬಂದಿದ್ದರು. ಆದರೆ ಕಲಬುರಗಿ ಕ್ಷೇತ್ರ ಅಭಿವೃದ್ಧಿ ಆಗಿಲ್ಲ. ಹೀಗಾಗಿ ಇಲ್ಲಿನ ಜನತೆ ಕಾಂಗ್ರೆಸ್ ಆಡಳಿತದಿಂದ ಬೇಸತ್ತು ಹೋಗಿದ್ದು, ಈ ಬಾರಿ ಬಿಜೆಪಿ ಅಭ್ಯರ್ಥಿ ಉಮೇಶ್​ ಜಾಧವ್​ಗೆ ಬೆಂಬಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

For All Latest Updates

TAGGED:

ABOUT THE AUTHOR

...view details