ಕರ್ನಾಟಕ

karnataka

ETV Bharat / city

ಇಎಸ್​​ಐ ಆಸ್ಪತ್ರೆಯ ಅವ್ಯವಸ್ಥೆ ಸರಿಪಡಿಸಲಾಗುವುದು: ಸಂಸದ ಉಮೇಶ್ ಜಾಧವ್

ಇಎಸ್​ಐ ಆಸ್ಪತ್ರೆಯಲ್ಲಿ ವೆಂಟಿಲೇಟರ್​​ಗಳ ಸಮಸ್ಯೆಯಿಂದಾಗಿ ಹಲವರು ಸಾವನ್ನಪ್ಪಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಂಸದ ಉಮೇಶ್ ಜಾಧವ್ ತಿಳಿಸಿದರು.

By

Published : Aug 3, 2020, 5:53 PM IST

MP Umesh Jadhav
ಸಂಸದ ಉಮೇಶ್ ಜಾಧವ್

ಕಲಬುರಗಿ: ಸಿಬ್ಬಂದಿ ಕೊರತೆ ಸೇರಿದಂತೆ ಇಎಸ್​​ಐ ಆಸ್ಪತ್ರೆಯಲ್ಲಿ ಆಗಿರುವ ಅವ್ಯವಸ್ಥೆಯನ್ನು ಸರಿಪಡಿಸಿ, ಸೋಂಕಿತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುತ್ತೇವೆ ಎಂದು ಸಂಸದ ಉಮೇಶ್ ಜಾಧವ್ ತಿಳಿಸಿದ್ದಾರೆ.

ಮಾದ್ಯಮದವರೊಂದಿಗೆ ಮಾತನಾಡಿದ ಅವರು, ವೆಂಟಿಲೇಟರ್​​ಗಳ ಸಮಸ್ಯೆಯಿಂದಾಗಿ ಹಲವರು ಸಾವನ್ನಪ್ಪಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಸಿಬ್ಬಂದಿಯ ಕೊರತೆ ಇದ್ದು, ಅದನ್ನೂ ಸರಿಪಡಿಸಲಾಗುವುದು ಎಂದರು.

ಸಂಸದ ಉಮೇಶ್ ಜಾಧವ್

ಕೋವಿಡ್ ಟೆಸ್ಟ್ ಲ್ಯಾಬ್ ಆರಂಭಗೊಳ್ಳದಿರುವ ಕುರಿತು ಪ್ರತಿಕ್ರಿಯಿಸಿದ ಜಾಧವ್, ಈಗಾಗಲೇ ಲ್ಯಾಬ್ ಉಪಕರಣಗಳು ಬಂದಿವೆ. ಅದನ್ನು ಜೋಡಿಸುವ ಕಾರ್ಯ ಪ್ರಾರಂಭಗೊಂಡಿದ್ದು, ಎರಡು-ಮೂರು ದಿನಗಳಲ್ಲಿ ಆಸ್ಪತ್ರೆಯಲ್ಲಿ ಲ್ಯಾಬ್ ಕಾರ್ಯಾರಂಭವಾಗಲಿದೆ ಎಂದರು.

ABOUT THE AUTHOR

...view details