ಕಲಬುರಗಿ :ಸಚಿವ ಸ್ಥಾನ ಕಳೆದುಕೊಳ್ಳುವ ಎಚ್ಚರಿಕೆ ಜೊತೆಗೆ ಸಾಕಷ್ಟು ಒತ್ತಡ ಹಾಕಿದರೂ ಮಣಿಯದೆ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರು ಕೋಲಿ ಸಮಾಜವನ್ನು ಎಸ್ಟಿಗೆ ಸೇರ್ಪಡೆ ಮಾಡಿರುವುದು ಹರ್ಷದಾಯಕ ವಿಷಯ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಮಾಲೀಕಯ್ಯ ಗುತ್ತೇದಾರ್ ಸಂತಸ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಳೆದ ಲೋಕಸಭೆ ಚುನಾವಣೆಯಲ್ಲಿ ನಾನು ಮತ್ತು ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಕೋಲಿ ಸಮುದಾಯವನ್ನು ಎಸ್ಟಿಗೆ ಸೇರಿಸುವ ಭರವಸೆ ನೀಡಿದ್ದೆವು. ಅದರಂತೆ ಈಗ ಕೋಲಿ ಸಮಾಜವನ್ನು ಎಸ್ಟಿಗೆ ಸೇರಿಸಲಾಗಿದೆ ಎಂದರು.