ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ಸಿಎಎ, ಎನ್ಆರ್ಸಿ ಜಾರಿಗೆ ತರುವ ಮೂಲಕ ದೇಶದಲ್ಲಿ ಜಗಳ ಹಚ್ಚಲು ಪ್ರಯತ್ನ ಪಡುತ್ತಿದ್ದಾರೆ ಎಂದು ಸಿಪಿಐಎಂ ಮುಖಂಡ ಬೃಂದಾ ಕಾರಟ್ ಕಿಡಿಕಾರಿದ್ದಾರೆ.
ನಗರದ ಅಮರ ಫಂಕ್ಷನ್ ಹಾಲ್ನಲ್ಲಿ ಆಯೋಜಿಸಿದ್ದ ಪೌರತ್ವ ವಿರೋಧಿಸಿ 'ದೇಶಕ್ಕಾಗಿ ನಾವು ಮಹಿಳೆಯರು' ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಧರ್ಮದ ಆಧಾರದ ಮೇಲೆ ದೇಶ ಒಡೆಯುತ್ತಿದ್ದಾರೆ. ಪಾರ್ಲಿಮೆಂಟಿನಲ್ಲಿ ಬಹುಮತ ಇದೆಯೆಂದು ಸಿಎಎ ಜಾರಿಗೆ ತಂದು ಮೋದಿ ಸರ್ಕಾರ ದೇಶದಲ್ಲಿ ಜಗಳ ಹಚ್ಚುತ್ತಿದೆ. ದೇಶದ 120 ಕೋಟಿ ಜನರಿಗೆ ದಾಖಲಾತಿ ತೋರಿಸಿ ಅಂತಾ ಹೇಳುತ್ತಾರೆ. ಮೊದಲು ಸಿಎಎ, ಎನ್ಆರ್ಸಿ ದೇಶದೆಲ್ಲೆಡೆ ಜಾರಿಯಾಗುತ್ತೆ ಅಂದ್ರು. ದೇಶದ ಜನ ಕೇಳಲು ಪ್ರಾರಂಭ ಮಾಡಿದಾಗ ಇದು ಕೇವಲ ಅಸ್ಸೋಂಗೆ ಸೀಮಿತ ಎಂದು ಕೈಜಾಡಿಸುತ್ತಿದ್ದಾರೆ. ಹೀಗಾಗಿ ಯಾರ ಮೇಲೂ ವಿಶ್ವಾಸವಿಡದೆ ನಾವು ಹೋರಾಟ ಮಾಡಬೇಕಿದೆ. ಅಂಬೇಡ್ಕರ್ ಕೊಟ್ಟ ಸಂವಿಧಾನದಲ್ಲಿ ಎಲ್ಲರಿಗೂ ಸಮಾನ ಹಕ್ಕಿದೆ. ದೇಶದ ಸಂವಿಧಾನಕ್ಕೆ ಧಕ್ಕೆ ಬಂದಾಗ ಎಲ್ಲರೂ ಹೋರಾಟ ಮಾಡಬೇಕೆಂದು ಕರೆ ನೀಡಿದರು.