ಕರ್ನಾಟಕ

karnataka

ETV Bharat / city

ಆಸ್ತಿಗಾಗಿ ತಂದೆ ಮಕ್ಕಳ ಭೀಕರ ಹತ್ಯೆ... ಕೊಡಲಿಯಿಂದ ಕೊಚ್ಚಿ ಮೂವರ ಕೊಲೆ - undefined

ಒಂದೇ ಕುಟುಂಬದ ಮೂವರನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಲಾಗಿದ್ದು, ಜಮೀನು ವಿವಾದವೇ ಕೊಲೆಗೆ ಕಾರಣ ಎನ್ನಲಾಗುತ್ತಿದೆ.

ತಂದೆ ಮಕ್ಕಳ ಭೀಕರ ಹತ್ಯೆ

By

Published : Jun 12, 2019, 2:18 PM IST

ಕಲಬುರಗಿ: ಜಮೀನು ಹಂಚಿಕೆ ವಿವಾದ ತಾರಕಕ್ಕೇರಿ ದಾಯಾದಿಗಳ ನಡುವೆ ನಡೆದ ಕಲಹ ಮೂವರ ಕೊಲೆಯಲ್ಲಿ ಅಂತ್ಯವಾದ ಅಮಾನವೀಯ ಘಟನೆ ಸೇಡಂ ತಾಲೂಕಿನ ಮೇದಕ್​ ಗ್ರಾಮದಲ್ಲಿ ನಡೆದಿದೆ.

ಮೇದಕ್​ ಗ್ರಾಮದ ಹೊರವಲಯದ ಹೊಲವೊಂದರಲ್ಲಿ ಮೂವರನ್ನು ಬರ್ಬರವಾಗಿ ಕೊಡಲಿಯಿಂದ ಕೊಚ್ಚಿ ಹತ್ಯೆಗೈಯಲಾಗಿದ್ದು, ಕೊಲೆಯಾದವರನ್ನು ಮಲ್ಕಪ್ಪ ಚಿನ್ನಯ್ಯ (60) ಹಾಗೂ ಈತನ ಮಕ್ಕಳು ಶಂಕ್ರಪ್ಪ ಮಲ್ಕಪ್ಪ (26) ಮತ್ತು ಚಿನ್ನಪ್ಪ ಮಲ್ಕಪ್ಪ (27) ಎಂದು ಗುರುತಿಸಲಾಗಿದೆ. ತಂದೆ ಮತ್ತು ಮಗ ಸ್ಥಳದಲ್ಲೇ ಮೃತಪಟ್ಟಿದ್ದು, ತೀವ್ರವಾಗಿ ಗಾಯಗೊಂಡ ಮತ್ತೋರ್ವ ಮಗ ಸೇಡಂ ಆಸ್ಪತ್ರೆಯಲ್ಲಿ ಅಸುನೀಗಿದ್ದಾನೆ.

ಕೊಲೆಗೆ ನಿಖರ ಮಾಹಿತಿ ದೊರೆತಿಲ್ಲವಾದರೂ ಜಮೀನು ವಿವಾದವೇ ಕೊಲೆಗೆ ಕಾರಣ ಎನ್ನಲಾಗುತ್ತಿದೆ. ಸ್ಥಳಕ್ಕೆ ಸಿಪಿಐ ತಮ್ಮರಾಯ ಪಾಟೀಲ್​ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ‌ ಮಾಡುತ್ತಿದ್ದಾರೆ. ಈ ಕುರಿತು ಮುಧೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಜಾಲ ಬೀಸಿದ್ದಾರೆ.

For All Latest Updates

TAGGED:

ABOUT THE AUTHOR

...view details