ಕಲಬುರಗಿ: ಚೌಕಿದಾರ್ ಚೋರ್ ಹೈ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿವಾಗ್ದಾಳಿ ನಡೆಸುವುದರಲ್ಲಿ ಯಾವುದೇ ತಪ್ಪಿಲ್ಲ ಅಂತಾಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ಸಮರ್ಥಿಸಿಕೊಂಡಿದ್ದಾರೆ. ಸುಪ್ರೀಂಕೋರ್ಟ್ ಕ್ಷಮೆ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಸಂಸದೀಯ ನಾಯಕ ಖರ್ಗೆ, ಚೌಕಿದಾರ್ ಚೋರ್ ಹೈ ಎಂದು ರಾಹುಲ್ ಹೇಳ್ತಿರೋದು ಸರಿಯಾಗಿದೆ ಅಂತಾ ಹೇಳಿದ್ದಾರೆ.
ಚೌಕಿದಾರ್ ಚೋರ್ ಹೈ ಎಂದು ರಾಹುಲ್ ವಾಗ್ದಾಳಿ ನಡೆಸುವುದರಲ್ಲಿ ತಪ್ಪಿಲ್ಲ- ಮಲ್ಲಿಕಾರ್ಜುನ್ ಖರ್ಗೆ ಸಮರ್ಥನೆ - kalburgi
ಸುಪ್ರೀಂಕೋರ್ಟ್ಗೆ ಏನು ಸ್ಪಷ್ಟನೆ ನೀಡಬೇಕೋ ಅದನ್ನ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೀಡಿದ್ದಾರೆ. ಆದರೆ, ಚೌಕಿದಾರ್ ನರೇಂದ್ರ ಮೋದಿ ಚೋರ್ ಅಂತಾ ರಾಹುಲ್ ಗಾಂಧಿ ಈಗಲೂ ವಾಗ್ದಾಳಿ ನಡೆಸುತ್ತಿದ್ದಾರೆ. ರಾಹುಲ್ ಗಾಂಧಿ ಮೋದಿ ವಿರುದ್ಧ ವಾಗ್ದಾಳಿ ನಡೆಸುತ್ತಿರುವುದರಲ್ಲಿ ಯಾವುದೇ ತಪ್ಪಿಲ್ಲ ಅಂತಾ ಮಲ್ಲಿಕಾರ್ಜುನ್ ಖರ್ಗೆ ಸಮರ್ಥಿಸಿಕೊಂಡಿದ್ದಾರೆ.
![ಚೌಕಿದಾರ್ ಚೋರ್ ಹೈ ಎಂದು ರಾಹುಲ್ ವಾಗ್ದಾಳಿ ನಡೆಸುವುದರಲ್ಲಿ ತಪ್ಪಿಲ್ಲ- ಮಲ್ಲಿಕಾರ್ಜುನ್ ಖರ್ಗೆ ಸಮರ್ಥನೆ](https://etvbharatimages.akamaized.net/etvbharat/prod-images/768-512-3199745-thumbnail-3x2-lek.jpg)
ರಾಹುಲ್ ಗಾಂಧಿಯವರಿಗೆ ತಮ್ಮ ಜಡ್ಜ್ಮೆಂಟ್ ಬಗ್ಗೆ ನೀವು ತಪ್ಪಾಗಿ ಕಮೆಂಟ್ ಮಾಡಿದ್ದೀರಿ ಎಂದು ಸುಪ್ರೀಂಕೋರ್ಟ್ ಸ್ಪಷ್ಟನೆ ಕೇಳಿತ್ತು. ಈ ಕುರಿತು ರಾಹುಲ್ ಗಾಂಧಿ ಸುಪ್ರೀಂಕೋರ್ಟ್ಗೆ ವಿವರಣೆ ನೀಡಿದ್ದಾರೆ. ಆದರೆ, ಭಾಷಣದಲ್ಲಿ ಮಾತ್ರ ರಾಹುಲ್ ಗಾಂಧಿ ಚೌಕಿದಾರ್ ಚೋರ್ ಹೈ ಎಂದು ಹೇಳುವುದನ್ನು ನಿಲ್ಲಿಸಿಲ್ಲ ಎಂದರು.
ಚುನಾವಣೆ ನಂತರ ರಾಜ್ಯ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದ ಖರ್ಗೆ, ಯಡಿಯೂರಪ್ಪ ಕನಸು ಕಾಣುತ್ತಲೇ ಇರಲಿ. ಲೋಕಸಭೆ ಫಲಿತಾಂಶ ಏನು ಬರುತ್ತದೆ ಬರಲಿ. ಆದರೆ, ಪದೇಪದೆ ಸರ್ಕಾರ ಪತನ ಆಗುತ್ತದೆ ಅನ್ನೋದು ಸರಿಯಲ್ಲ. ಜಾತ್ಯಾತೀತ ತತ್ವದ ಮೇಲೆ ಸಮಿಶ್ರ ಸರ್ಕಾರ ರಚನೆಗೊಂಡಿದ್ದು, ಅದನ್ನು ಅಭದ್ರಗೊಳಿಸೋದು ಅಸಾಧ್ಯ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
TAGGED:
kalburgi