ಕಲಬುರಗಿ: ಜಾತಿ ಆಧಾರದ ಮೇಲೆ ವ್ಯಕ್ತಿಯನ್ನು ಮುಗಿಸಲು ಬಿಜೆಪಿ ಹೊರಟಿತ್ತು. ಅದರ ವಿರುದ್ಧ ಸಿಡಿದ್ದೆದ್ದು ಇಂದು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದೇನೆ ಎಂದು ಬಂಜಾರ ಸಮುದಾಯದ ಪ್ರಭಾವಿ ನಾಯಕ ಸುಭಾಷ್ ರಾಠೋಡ್ ಹೇಳಿದ್ದಾರೆ.
ಚಿಂಚೋಳಿಯಲ್ಲಿ ನಡೆದ ಕಾಂಗ್ರೆಸ್ ಸಭೆಯಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಸುಭಾಷ್ ರಾಠೋಡ್, ಮಲ್ಲಿಕಾರ್ಜುನ ಖರ್ಗೆ ಹೈದರಾಬಾದ್ ಕರ್ನಾಟಕದ ದಿಟ್ಟ ನಾಯಕ. ಸಂಸತ್ನಲ್ಲಿ ಮೋದಿಯ ಪೊಳ್ಳುತನವನ್ನು ದೇಶದ ಮುಂದೆ ಬಯಲು ಮಾಡಿದ್ದಾರೆ. ಅಂತಹ ನಾಯಕರನ್ನು ಸೋಲಿಸಲು ಬಿಜೆಪಿ ಜಾತಿ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದರು.