ಕಲಬುರ್ಗಿ:ಅಫಜಲಪುರ ತಾಲೂಕಿನ ಮಾಶಾಳ ಸಿದ್ದಲಿಂಗೇಶ್ವರ ಸಂಸ್ಥಾನ ಹಿರೇಮಠದ ಕೇದಾರ ಶ್ರೀಗಳು ಈಚೆಗೆ ಲವ್ ಜಿಹಾದ್ ವಿರುದ್ಧ ಮಾತನಾಡಿದ್ದಕ್ಕೆ ಯಾರೋ ಕಿಡಿಗೇಡಿಗಳು ಮಠದ ಮೇಲೆ ತೂರಾಟ ಮಾಡಿದ ಘಟನೆ ಗುರುವಾರ ರಾತ್ರಿ ನಡೆದಿದೆ.
ಗುರುವಾರ ರಾತ್ರಿ ವೇಳೆ ಮಠದಲ್ಲಿ ಶ್ರೀಗಳು ಇದ್ದ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿದ್ದಾರೆ. ಅಲ್ಲದೇ ಕೇದಾರ ಶ್ರೀಗಳ ಮೇಲೆ ಹಲ್ಲೆಗೂ ಯತ್ನಿಸಿದ್ದಾರೆ ಎಂದು ಹೇಳಲಾಗಿದೆ.
ಕಿಡಿಗೇಡಿಗಳು ಮಠದ ಕಿಟಕಿಗಳಿಗೆ ಕಲ್ಲಿನಿಂದ ಗ್ಲಾಸ್ ಪುಡಿ ಪುಡಿ ಮಾಡಿದ್ದಾರೆ. ಮಠದ ಭಕ್ತರು ತಕ್ಷಣ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.