ಕಲಬುರಗಿ: ಕಾರ್ಮಿಕ ದಿನಾಚರಣೆ ಹಿನ್ನೆಲೆ ಇಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಆಶಾ ಕಾರ್ಯಕರ್ತೆಯರ ಸಮಾವೇಶ ನಡೆಯಿತು. ಕಾರ್ಯಕ್ರಮಕ್ಕೆ ಎಐಯುಟಿಯುಸಿ ರಾಜ್ಯ ಸಮಿತಿ ಸದಸ್ಯ ಎಂ ಶಶಿಧರ್ ಚಾಲನೆ ನೀಡಿದರು.
ಎನ್ಡಿಎ ಸರ್ಕಾರ ಉದ್ಯೋಗ ಸೃಷ್ಟಿಸುವ ಬದಲು ಇರುವ ಉದ್ಯೋಗಗಳನ್ನೇ ಕಿತ್ತುಕೊಳ್ಳುತ್ತಿದೆ: ಎಂ. ಶಶಿಧರ್
ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಕಾರ್ಮಿಕ ವಿರೋಧಿಯಾಗಿದೆ. ಉದ್ಯೋಗ ಸೃಷ್ಟಿಯ ಬದಲಿಗೆ ಇರುವ ಉದ್ಯೋಗಗಳನ್ನೇ ಕಿತ್ತುಕೊಳ್ಳುವ ಕೆಲಸವನ್ನು ಮೋದಿ ಸರ್ಕಾರ ಮಾಡುತ್ತಿದೆ ಎಂದು ಎಐಯುಟಿಯುಸಿ ರಾಜ್ಯ ಸಮಿತಿ ಸದಸ್ಯ ಎಂ ಶಶಿಧರ್ ಟೀಕಿಸಿದರು.
ಆಶಾ ಕಾರ್ಯಕರ್ತೆಯರ ಸಮಾವೇಶ
ನಂತರ ಮಾತನಾಡಿದ ಅವರು, ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಕಾರ್ಮಿಕ ವಿರೋಧಿಯಾಗಿದೆ. ಉದ್ಯೋಗ ಸೃಷ್ಟಿಯ ಬದಲಿಗೆ ಇರುವ ಉದ್ಯೋಗಗಳನ್ನೇ ಕಿತ್ತುಕೊಳ್ಳುವ ಕೆಲಸ ಮಾಡುತ್ತಿದೆ ಎಂದು ಟೀಕಿಸಿದರು.
ಇನ್ನು ಸಮಾವೇಶದಲ್ಲಿ ಆಶಾ ಕಾರ್ಯಕರ್ತೆಯರ ಕುಂದುಕೊರತೆಯ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು. ಈ ವೇಳೆ ಆಶಾ ಸಂಘಟನೆಯ ನಗರಾಧ್ಯಕ್ಷರಾದ ವಿ.ಜಿ ದೇಸಾಯಿ, ಎಐಯುಟಿಯುಸಿಯ ಶಿವಲಿಂಗಮ್ಮ ಸೇರಿದಂತೆ ಅನೇಕ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.
TAGGED:
kalburgi