ಕರ್ನಾಟಕ

karnataka

ETV Bharat / city

ನೆಲ್ಯಾಡಿ: ರಬ್ಬರ್‌ಶೀಟ್ ಕಳವು ಆರೋಪ- ಮೂವರು ಅಂದರ್​​! - nelyadi dakshina kannada latest news

ರಬ್ಬರ್‌ಶೀಟ್ ಕಳವು ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಉಪ್ಪಿನಂಗಡಿ ಮತ್ತು ನೆಲ್ಯಾಡಿ ಹೊರಠಾಣೆ ಪೊಲೀಸರು ಬಂಧಿಸಿದ್ದಾರೆ.

3 arrested in the rubber sheet theft case of nelyadi
ರಬ್ಬರ್‌ಶೀಟ್ ಕಳವು ಆರೋಪದಡಿ ಮೂವರು ಅಂದರ್

By

Published : Sep 15, 2021, 10:12 AM IST

ನೆಲ್ಯಾಡಿ: ಗುಂಡ್ಯದಲ್ಲಿ ನಿಲ್ಲಿಸಿದ್ದ ಲಾರಿಯೊಂದರಿಂದ ಲಕ್ಷಾಂತರ ರೂ. ಮೌಲ್ಯದ ರಬ್ಬರ್‌ಶೀಟ್ ಕಳವು ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಉಪ್ಪಿನಂಗಡಿ ಮತ್ತು ನೆಲ್ಯಾಡಿ ಹೊರಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಕಡಬ ತಾಲೂಕಿನ ಶಿರಾಡಿ ಗ್ರಾಮದ ಮಿತ್ತಮಜಲು ನಿವಾಸಿ ರಿಜು ಯಾನೆ ತೋಮಸ್ (33), ಎಡಪ್ಪಾಟ್ ನಿವಾಸಿ ಇ.ಪಿ ವರ್ಗಿಸ್(48), ಪೇರಮಜಲು ನಿವಾಸಿ ಶೀನಪ್ಪ (46) ಎಂದು ಗುರುತಿಸಲಾಗಿದೆ.

ಘಟನೆ ವಿವರ:ಉಜಿರೆಯಿಂದ ತಮಿಳುನಾಡಿಗೆ ರಬ್ಬರ್ ಶೀಟ್ ಸಾಗಾಟ ಮಾಡುತ್ತಿದ್ದ ಲಾರಿ(TN 73 M 3499)ಯನ್ನು ಜು. 25ರಂದು ದೋಣಿಗಲ್‌ನಲ್ಲಿ ರಸ್ತೆ ಕುಸಿತಗೊಂಡು ಸಂಚಾರ ಸಾಧ್ಯವಾಗದೇ ಇರುವ ಹಿನ್ನೆಲೆಯಲ್ಲಿ ಲಾರಿ ಚಾಲಕ ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯದಲ್ಲಿ ನಿಲ್ಲಿಸಿದ್ದರು. ಮರುದಿನ ಬೆಳಗ್ಗೆ ತಮಿಳುನಾಡು ಮೂಲದವರಾದ ಲಾರಿಯ ನಿರ್ವಾಹಕ ಲಾರಿಗೆ ಅಳವಡಿಸಲಾಗಿದ್ದ ಟಾರ್ಪಲ್​ನಲ್ಲಿ ನಿಂತಿದ್ದ ನೀರು ತೆಗೆಯಲೆಂದು ಲಾರಿಯ ಮೇಲೆ ಹತ್ತಿದ್ದು, ಅಲ್ಲಿಂದ ಆಯತಪ್ಪಿ ಕೆಳಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು.

ರಬ್ಬರ್‌ಶೀಟ್ ಕಳವು ಆರೋಪದಡಿ ಮೂವರು ಅಂದರ್

ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಗಂಭೀರವಾಗಿ ಗಾಯಗೊಂಡಿದ್ದ ನಿರ್ವಾಹಕ ಚಿಕಿತ್ಸೆಗೆ ಸ್ಪಂದಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಈ ಕಾರಣದಿಂದಾಗಿ ನಿರ್ವಾಹಕನ ಮೃತದೇಹವನ್ನು ಲಾರಿ ಚಾಲಕನು ತಮಿಳುನಾಡಿಗೆ ಕೊಂಡೊಯ್ದು ಕುಟುಂಬಸ್ಥರಿಗೆ ಒಪ್ಪಿಸಿ ಮರುದಿನ ಲಾರಿ ನಿಲ್ಲಿಸಿದ್ದ ಗುಂಡ್ಯಕ್ಕೆ ಬಂದ ವೇಳೆ ಲಾರಿಯಲ್ಲಿದ್ದ ಅರ್ಧದಷ್ಟು ರಬ್ಬರ್ ಶೀಟ್ ಕಳವುವಾಗಿದ್ದು ಗಮನಕ್ಕೆ ಬಂದಿತ್ತು.

ಈ ಬಗ್ಗೆ ಲಾರಿ ಚಾಲಕನು ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದರು. ಮೂವರು ಆರೋಪಿಗಳು ಸೇರಿಕೊಂಡು ತಂಗಚ್ಚನ್ ಎಂಬುವವರ ಜೀಪಿನಲ್ಲಿ ಸನೋಜ್ ಎಂಬುವವನ ನೆರವಿನೊಂದಿಗೆ ನಿಲ್ಲಿಸಿದ ಲಾರಿಯಿಂದ ರಬ್ಬರ್ ಶೀಟ್​​ಗಳನ್ನು ಕಳವು ಮಾಡಿದ್ದರು.

ಪೊಲೀಸರು ವಶಪಡಿಸಿಕೊಂಡ ಸ್ವತ್ತು:

ಕಳವು ಮಾಡಿದ ರಬ್ಬರ್ ಶೀಟ್ ಅಂದರೆ 25 ಕೆ.ಜಿ.ಯ ಸುಮಾರು 1,4500 ರೂಪಾಯಿ ಮೌಲ್ಯದ 35 ಬಂಡಲ್​​ಗಳ ಪೈಕಿ 17 ಬಂಡಲ್​​ಗಳನ್ನು ವಶಪಡಿಸಲಾಗಿದೆ. ಇದರ ಒಟ್ಟು ತೂಕ 425 ಕೆ.ಜಿ ಇದ್ದು, ಇದರ ಅಂದಾಜು ಮೌಲ್ಯ ರೂ.75,000/- ಹಾಗೂ ರಬ್ಬರ್ ಶೀಟ್ ಸಾಗಿಸಲು ಉಪಯೋಗಿಸಿದ ಜೀಪಿನ ಅಂದಾಜು ಮೌಲ್ಯ-1,50,000/- ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ:9 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಭೂಸ್ವಾಧೀನ ಅಧಿಕಾರಿಗಳು ಎಸಿಬಿ ಬಲೆಗೆ

ದ.ಕ ಜಿಲ್ಲಾ ಎಸ್ಪಿ ಹಾಗೂ ಅಡಿಷನಲ್ ಎಸ್ಪಿ ಅವರ ಮಾರ್ಗದರ್ಶನದಲ್ಲಿ ಪುತ್ತೂರು ಡಿವೈಎಸ್ಪಿ ಗಾನಾ ಪಿ ಕುಮಾರ್ ಅವರ ನೇತೃತ್ವದಲ್ಲಿ, ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕರಾದ ಉಮೇಶ್ ಉಪ್ಪಳಿಕೆ, ಉಪ್ಪಿನಂಗಡಿ ಠಾಣಾ ಪಿಎಸ್‌ಐ ಕುಮಾರ್ ಕಾಂಬ್ಳೆ, ಸಿಬ್ಬಂದಿಗಳಾದ ಎಎಸ್ಐ ಸೀತಾರಾಮ ಗೌಡ ಮತ್ತು ಸಿಬ್ಬಂದಿ ಹೆಚ್.ಸಿ ಹಿತೋಷ್ ಕುಮಾರ್, ಹೆಚ್.ಸಿ ಕೃಷ್ಣಪ್ಪ ನಾಯ್ಕ , ಪಿಸಿ ಯೋಗರಾಜ್ ಮುಂತಾದವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ABOUT THE AUTHOR

...view details