ಕರ್ನಾಟಕ

karnataka

ETV Bharat / city

ಬಸ್​ನಲ್ಲಿ ಯುವಕನ ಜೊತೆ ಮಂಗಳೂರಿನ ಮಹಿಳೆ ಪ್ರಯಾಣ.. ಅನ್ಯಮತೀಯ ಜೋಡಿ ಎಂದು ತಿಳಿದವರೇ ಬೆಪ್ಪರಾದ್ರು - ನೈತಿಕ ಪೊಲೀಸ್ ಗಿರಿ

ಖಾಸಗಿ ಬಸ್​ವೊಂದರಲ್ಲಿ ಬಿಹಾರದ ಯುವಕನ ಜೊತೆಗೆ ಯುವತಿಯೊಬ್ಬಳು ಪ್ರಯಾಣಿಸುತ್ತಿದ್ದ ವೇಳೆ ಅವರಿಬ್ಬರು ಅನ್ಯಮತೀಯ ಜೋಡಿ ಎಂದು ಬಸ್ ತಡೆದವರು ಬೆಪ್ಪರಾದ ಘಟನೆ ನಡೆದಿದೆ.

Mangalore Clock Tower
ಮಂಗಳೂರು ಕ್ಲಾಕ್​ ಟವರ್​

By

Published : Mar 19, 2022, 4:38 PM IST

ಮಂಗಳೂರು:ಖಾಸಗಿ ಬಸ್​ವೊಂದರಲ್ಲಿ ಬಿಹಾರದ ಯುವಕನ ಜೊತೆಗೆ ಮಹಿಳೆಯೊಬ್ಬಳು ಪ್ರಯಾಣಿಸುತ್ತಿದ್ದಳು. ಇವರನ್ನು ನೋಡಿದ ಕೆಲವರಿಗೆ ತಲೆಯಲ್ಲಿ ಮತೀಯ ವಿಚಾರ ಬಂದಿದೆ. ಇವರಿಬ್ಬರನ್ನು ಅನ್ಯಮತೀಯ ಜೋಡಿ ಎಂದು ಬಸ್ ತಡೆದವರಿಗೇ ಕೊನೆಗೆ ತಾವು ತಪ್ಪು ತಿಳಿದಿರುವುದು ಅರಿವಿಗೆ ಬಂದಿರುವ ಘಟನೆ ಶುಕ್ರವಾರ ಮಂಗಳೂರಿನ ಗುರುಪುರದಲ್ಲಿ ನಡೆದಿದೆ.

ಮಂಗಳೂರಿನ ವಿವಾಹಿತ ಮಹಿಳೆಯೊಬ್ಬಳು ಬಿಹಾರದ ಗೆಳೆಯನೊಂದಿಗೆ ಬಸ್​ನಲ್ಲಿ ಸಂಚರಿಸುತ್ತಿದ್ದಳು. ಮೂಡುಬಿದಿರೆಯಿಂದ ಮಂಗಳೂರಿಗೆ ಬರುತ್ತಿದ್ದ ಬಸ್​ನಲ್ಲಿದ್ದ ಯುವಕ ಮತ್ತು ಗೃಹಿಣಿಯನ್ನು ನೋಡಿದವರು ಅವರು ಅನ್ಯಮತೀಯ ಜೋಡಿ ಎಂದು ಗುರುಪುರದ ಹಿಂದೂ ಸಂಘಟನೆಯ ಕಾರ್ಯಕರ್ತರಿಗೆ ಮಾಹಿತಿ ನೀಡಿದ್ದರು.

ಗುರುಪುರದ ಅಲೈಗುಡ್ಡೆ ಎಂಬಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ಬಸ್ ತಡೆದು ಯುವಕ ಮತ್ತು ಮಹಿಳೆಯನ್ನು ಕೆಳಗಿಳಿಸಿದ್ದಾರೆ. ಯುವಕ-ಮಹಿಳೆಯನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ವಿಚಾರಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಬಜ್ಪೆ ಪೊಲೀಸರು ಸ್ಥಳಕ್ಕಾಗಮಿಸಿದ್ದಾರೆ. ಆಗ ಇಬ್ಬರು ಒಂದೇ ಸಮುದಾಯಕ್ಕೆ ಸೇರಿದವರೆಂದು ವಿಚಾರಣೆಯ ವೇಳೆ ಪೊಲೀಸರಿಗೆ ತಿಳಿದುಬಂದಿದೆ.

ಅನ್ಯಮತೀಯ ಜೋಡಿ ಎಂದು‌ ನೈತಿಕ ಪೊಲೀಸ್ ಗಿರಿ ನಡೆಸಲು ಹೋದವರು ಈ ಜೋಡಿ ಒಂದೇ ಸಮುದಾಯದವರೆಂದು ತಿಳಿದು ಬಂದ ಹಾದಿಗೆ ಸುಂಕ ಇಲ್ಲವೆಂಬಂತೆ ಅಲ್ಲಿಂದ ವಾಪಸ್​ ಆಗಿದ್ದಾರೆ.

ABOUT THE AUTHOR

...view details