ಕರ್ನಾಟಕ

karnataka

ನೂತನ ಸಚಿವರಾಗಿ ಜಿಲ್ಲೆಗೆ ಆಗಮಿಸಿದ ಎಸ್. ಅಂಗಾರರಿಗೆ ಅದ್ಧೂರಿ ಸ್ವಾಗತ

By

Published : Jan 15, 2021, 7:14 PM IST

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಶಾಸಕ ಎಸ್. ಅಂಗಾರ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಪ್ರಥಮ ಬಾರಿಗೆ ಜಿಲ್ಲೆಗೆ ಭೇಟಿ ನೀಡಿದರು. ಜಿಲ್ಲೆಗೆ ಆಗಮಿಸಿದ ನೂತನ ಸಚಿವರನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು. ನಂತರ ಕಲ್ಲಡ್ಕ ಶ್ರೀರಾಮ ಕೇಂದ್ರಕ್ಕೆ ಭೇಟಿ ನೀಡಿ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರ ಆಶೀರ್ವಾದ ಪಡೆದರು.

after-getting-minister-position-s-angara-visited-mangalore
ಎಸ್ ಅಂಗಾರ

ಮಂಗಳೂರು : ನೂತನ ಸಚಿವರಾದ ಬಳಿಕ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದ ಎಸ್. ಅಂಗಾರ ಅವರನ್ನು ಅಭಿಮಾನಿಗಳು ಮತ್ತು ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತಿಸಿದರು.

ನೂತನ ಸಚಿವರಾದ ಬಳಿಕ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದ ಎಸ್. ಅಂಗಾರರಿಗೆ ಅದ್ಧೂರಿ ಸ್ವಾಗತ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಶಾಸಕ ಎಸ್. ಅಂಗಾರ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಪ್ರಥಮ ಬಾರಿಗೆ ಜಿಲ್ಲೆಗೆ ಭೇಟಿ ನೀಡಿದರು. ಜಿಲ್ಲೆಗೆ ಆಗಮಿಸಿದ ನೂತನ ಸಚಿವರನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು. ನಂತರ ಕಲ್ಲಡ್ಕ ಶ್ರೀರಾಮ ಕೇಂದ್ರಕ್ಕೆ ಭೇಟಿ ನೀಡಿ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರ ಆಶೀರ್ವಾದ ಪಡೆದರು.

ಬಳಿಕ ಪುತ್ತೂರಿನ ಹಿರಿಯ ಬಿಜೆಪಿ ಮುಖಂಡ ಹಾಗೂ ಮಾಜಿ ಶಾಸಕ ರಾಮ್ ಭಟ್ ಅವರ ನಿವಾಸಕ್ಕೆ ತೆರಳಿ ಆಶೀರ್ವಾದ ಪಡೆದರು. ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ನೆರವೇರಿಸಿದ ಸಚಿವರಿಗೆ ಸುಳ್ಯ ನಾಗರಿಕರ ವತಿಯಿಂದ ಜಾಲ್ಸೂರಿನಲ್ಲಿ ಭವ್ಯ ಸ್ವಾಗತ ಕೋರಲಾಯಿತು.

ಓದಿ-ಯುವಕರ ಹಳೆ ದ್ವೇಷ ಹತ್ಯೆಯಲ್ಲಿ ಅಂತ್ಯ.. ಗ್ರಾಮಗಳ ಮಧ್ಯೆ ಮಾರಾಮಾರಿ

ಪುತ್ತೂರಿಗೆ ನೂತನ ಸಚಿವರ ಆಗಮನ

ಮೊದಲು ನಗರಕ್ಕೆ ಆಗಮಿಸಿದ ಸಚಿವರು, ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಂಗಾರ, ಜಿಲ್ಲೆಯ ಅಭಿವೃದ್ಧಿಯ ನಿಟ್ಟಿನಲ್ಲಿ ಎಲ್ಲಾ ಪ್ರಯತ್ನ ನಡೆಸುವುದಾಗಿ ಜೊತೆಗೆ ಪಕ್ಷದ ಸಂಘಟನೆಯಲ್ಲೂ ತೊಡಗಿಸಿಕೊಳ್ಳುವುದಾಗಿ ಭರವಸೆ ನೀಡಿದರು.

ABOUT THE AUTHOR

...view details