ಕರ್ನಾಟಕ

karnataka

ETV Bharat / city

ಬೆಳ್ತಂಗಡಿ: ಬಾಲಕಿ ಮೇಲೆ ಅತ್ಯಾಚಾರ ಆರೋಪ, ಹಲ್ಲೆ ಬಿಡಿಸಲು ಹೋದ ವ್ಯಕ್ತಿ ‌ಸಾವು

ಗಲಾಟೆ ಬಿಡಿಸಲು ಹೋದ ವ್ಯಕ್ತಿಯೇ ಹಲ್ಲೆಗೊಳಗಾಗಿ ಪ್ರಾಣ ಕಳೆದುಕೊಂಡ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ.

By

Published : Jul 23, 2022, 10:38 PM IST

Updated : Jul 24, 2022, 8:00 AM IST

ಜಾರಪ್ಪ ನಾಯ್ಕ್
ಜಾರಪ್ಪ ನಾಯ್ಕ್

ಬೆಳ್ತಂಗಡಿ(ದಕ್ಷಿಣ ಕನ್ನಡ): ಗಲಾಟೆ ಬಿಡಿಸಲು ಹೋದ ವ್ಯಕ್ತಿ ಹಲ್ಲೆಗೊಳಗಾಗಿ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಬಳಿ ನಡೆದಿದೆ. ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂಬ ಆರೋಪದ ಮೇಲೆ ಓರ್ವನ ಮೇಲೆ ಹಲ್ಲೆ ನಡೆದಿದೆ. ಇದನ್ನು ತಡೆಯಲು ಬಂದ ಸಂಬಂಧಿಕನೊಬ್ಬನ ಮೇಲೂ ಹಲ್ಲೆ‌ಗೈಯ್ಯಲಾಗಿದ್ದು, ಆಸ್ಪತ್ರೆಗೆ ಸಾಗಿಸುವ ವೇಳೆ ಆತ ಸಾವನ್ನಪ್ಪಿರುವ ಘಟನೆ ಇಂದಬೆಟ್ಟು ಗ್ರಾಮದ ಪರಾರಿ ಶಾಂತಿನಗರ ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಪರಾರಿ ಶಾಂತಿನಗರದಲ್ಲಿ ನಾರಾಯಣ ನಾಯ್ಕ್(47) ಎಂಬುವರ ಮೇಲೆ ಶಾಂತಿನಗರ ಆಟದ ಮೈದಾನದಲ್ಲಿ ಯುವಕರ ಗುಂಪೊಂದು ಅಡ್ಡಗಟ್ಟಿ ನೀನು ನಾಲ್ಕು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದೀಯಾ ಎಂದು ಹೇಳಿ ಮಾರಣಾಂತಿಕ ಹಲ್ಲೆ ನಡೆಸುತ್ತಿದ್ದರು. ಇದನ್ನು ಕಂಡ ನಾರಾಯಣ ನಾಯ್ಕ್ ಹೆಂಡತಿಯ‌ ಅಕ್ಕನ ಗಂಡ ಜಾರಪ್ಪ ನಾಯ್ಕ್ (55) ತಪ್ಪಿಸಲು ಬಂದಿದ್ದು, ಅವರ ಮೇಲೆಯೂ ಮಾರಣಾಂತಿಕ ಹಲ್ಲೆ‌ ನಡೆಸಲಾಗಿತ್ತು.

ಈ ವೇಳೆ ಗಂಭೀರ ಗಾಯಗೊಂಡಿದ್ದ ಜಾರಪ್ಪ ನಾಯ್ಕ್ ಮತ್ತು ನಾರಾಯಣ ನಾಯ್ಕ್ ಇಬ್ಬರು ಅಸ್ವಸ್ಥರಾಗಿ ಬಿದ್ದಿದ್ದರು. ಈ ಬಗ್ಗೆ ಸ್ಥಳೀಯರು ಮನೆಯವರಿಗೆ ಮಾಹಿತಿ ನೀಡಿದಾಗ ಜಾರಪ್ಪ ಅವರ ಮಗ ರಾಜಶೇಖರ್ ಬಂದು ವಾಹನದಲ್ಲಿ ಉಜಿರೆ ಖಾಸಗಿ ಆಸ್ಪತ್ರೆಗೆ ಕರೆತರುತ್ತಿದ್ದಾಗ ದಾರಿ ಮಧ್ಯೆ ಹೃದಯಾಘಾತದಿಂದ ಜಾರಪ್ಪ ನಾಯ್ಕ್ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ನಾರಾಯಣ ನಾಯ್ಕ್​ರನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ :ನಿಮ್ ಬಾಸ್ ಗೊತ್ತಿಲ್ಲ‌ ಎಂದಿದ್ದಕ್ಕೆ ಕೊಲೆ: ಬರ್ಬರ ಹತ್ಯೆಯ ಹಿಂದೆ ಕುಳ್ಳು ರಿಜ್ವಾನ್ ಶಿಷ್ಯರು

Last Updated : Jul 24, 2022, 8:00 AM IST

ABOUT THE AUTHOR

...view details