ಕರ್ನಾಟಕ

karnataka

By

Published : Aug 31, 2022, 1:00 PM IST

ETV Bharat / city

ಮಂಗಳೂರು ಮೋದಿ ಸಮಾವೇಶಕ್ಕೆ ಬಿಜೆಪಿ ಫುಲ್ ತಯಾರಿ.. ಲಕ್ಷಗಟ್ಟಲೆ ಜನ ಸೇರಿಸಲು ಬಿಜೆಪಿ ಪ್ಲಾನ್​

ವಿವಿಧ ಕಾರ್ಯಕ್ರಮಗಳ ಚಾಲನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್​ 2 ರಂದು ಮಂಗಳೂರಿಗೆ ಆಗಮಿಸಲಿದ್ದು, ಸಮಾವೇಶದ ಯಶಸ್ಸಿಗೆ ಬಿಜೆಪಿ ಭರದ ಸಿದ್ಧತೆ ನಡೆಸಿದೆ.

mangalore-pm-modi-programme
Etv Bharatಮಂಗಳೂರು ಮೋದಿ ಸಮಾವೇಶಕ್ಕೆ ಬಿಜೆಪಿ ಫುಲ್ ತಯಾರಿ

ಬೆಂಗಳೂರು/ಮಂಗಳೂರು:ನಾಡಿದ್ದು (ಸೆ.2) ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿಗೆ ಪ್ರಧಾನಿ ನರೇಂದ್ರ‌ ಮೋದಿ ಆಗಮಿಸುವ ಹಿನ್ನೆಲೆಯಲ್ಲಿ ಇಲ್ಲಿನ ಗೋಲ್ಡ್ ಪಿಂಚ್ ಮೈದಾನದಲ್ಲಿ ಆಯೋಜಿಸಿರುವ ಸಮಾವೇಶದ ಯಶಸ್ಸಿಗೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ನೇತೃತ್ವದಲ್ಲಿ ಭರದ ಸಿದ್ಧತೆ ನಡೆಸಲಾಗುತ್ತಿದೆ. ಕಾರ್ಯಕ್ರಮಕ್ಕೆ 1 ಲಕ್ಷಕ್ಕೂ ಮೇಲ್ಪಟ್ಟು ಜನರು ಸೇರುವ ನಿರೀಕ್ಷೆ ಇದೆ.

ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಬಳಿಕ ಸಮಾವೇಶ ನಡೆಯಲಿದ್ದು, ರಾಜಕೀಯವಾಗಿಯೂ ಇದು ಮಹತ್ವ ಪಡೆದಿರುವುದರಿಂದ ಸಣ್ಣಪುಟ್ಟ ಸಂಗತಿಗಳಿಗೂ ಬಿಜೆಪಿ ವಿಶೇಷ ಗಮನ ನೀಡುತ್ತಿದೆ. ಇದಕ್ಕಾಗಿ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್​ಕುಮಾರ್ ಕಾರ್ಯಕ್ರಮದ ಮೇಲುಸ್ತುವಾರಿ ವಹಿಸಿದ್ದಾರೆ. ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಜೊತೆಗೆ ಈಗಾಗಲೇ ಸ್ಥಳ ಪರಿಶೀಲನೆ ನಡೆಸಿದ್ದಲ್ಲದೆ ಸಭೆ ನಡೆಸಿದ್ದಾರೆ.

ಮೋದಿ ಅವರ ಸಮಾವೇಶಕ್ಕೆ ಕರಾವಳಿ ಜಿಲ್ಲೆಗಳಲ್ಲೇ ಇತ್ತೀಚಿನ‌ ದಿನಗಳಲ್ಲಿ ಸೇರದೇ ಇರುವಷ್ಟು ಜನರನ್ನು ಸೇರಿಸಲು ಯೋಜಿಸಲಾಗಿದೆ. ಕರಾವಳಿ, ಬಿಜೆಪಿಯ ಭದ್ರಕೋಟೆ ಆಗಿರುವುದರಿಂದ ಸ್ವಯಂ ಪ್ರೇರಣೆಯಿಂದಲೇ ಜನರು ಸಮಾವೇಶಕ್ಕೆ ಆಗಮಿಸಲಿದ್ದಾರೆ. ಸುಮಾರು ಒಂದು ಲಕ್ಷ ಜನರು ಮೋದಿ ಭಾಷಣ ಕೇಳುವುದಕ್ಕೆ ಬರುವ ನಿರೀಕ್ಷೆ ಇದೆ.

ಮೋದಿ ಸಮಾವೇಶಕ್ಕೆ ಎರಡು ಸಾವಿರ ಬಸ್:ಸಮಾವೇಶ ಸ್ಥಳಕ್ಕೆ ಕಾರ್ಯಕರ್ತರು ಹಾಗೂ ಸಾರ್ವಜನಿಕರನ್ನು ಕರೆತರುವುದಕ್ಕೆ ಸುಮಾರು 2 ಸಾವಿರ ಬಸ್​ಗಳ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ಸಮರ್ಪಕ ಪಾರ್ಕಿಂಗ್ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ. ‌ಕಾರ್ಯಕ್ರಮದ ಬಳಿಕ ಬಿಜೆಪಿ ಕೋರ್ ಕಮಿಟಿ ಸಭೆ ಸೇರಿದಂತೆ ಸುಮಾರು 1 ಗಂಟೆ ಕಾಲ ಪಕ್ಷದ ನಾಯಕರ ಜೊತೆಗೆ ಪ್ರಧಾನಿ ಮೋದಿ ಚರ್ಚೆ ನಡೆಸಲಿದ್ದಾರೆ.

ಮೋದಿಗೆ ಪರಶುರಾಮ ಪುತ್ಥಳಿ:ಪ್ರಧಾನಿ ಮೋದಿ ಅವರಿಗೆ ಕಾರ್ಯಕ್ರಮದ ಸ್ಮರಣಾರ್ಥವಾಗಿ ತುಳುನಾಡು ನಿರ್ಮಾತೃ ಪರಶುರಾಮನ ಭವ್ಯ ಪುತ್ಥಳಿಯನ್ನು ಉಡುಗೊರೆ ರೂಪದಲ್ಲಿ ಕೊಡಲು ನಿಶ್ಚಯಿಸಲಾಗಿದೆ. ಈ ಪುತ್ಥಳಿಯನ್ನು ವಿಶೇಷ ಆಸ್ಥೆಯಿಂದ ಸಿದ್ಧಪಡಿಸುವುದಕ್ಕೆ ಸಚಿವ ಸುನಿಲ್ ಕುಮಾರ್ ಈಗಾಗಲೇ ಸೂಚನೆ ನೀಡಿದ್ದಾರೆ. ಕರಾವಳಿಯ ಇತಿಹಾಸದಲ್ಲಿ ನ ಭೂತೋ ನ ಭವಿಷ್ಯತಿ​ ಎಂಬಂತೆ ಕಾರ್ಯಕ್ರಮ ಯಶಸ್ವಿಗೊಳಿಸಲು ಕೇಸರಿ ಪಡೆ ಪಣತೊಟ್ಟಿದೆ.

ಓದಿ:ಹಿಂದೂಸ್ಥಾನದಲ್ಲಿ ಗಣಪತಿ ಪ್ರತಿಷ್ಠಾಪನೆ ಮಾಡುತ್ತೇವೆ ಇದು ಪಾಕಿಸ್ತಾನವಲ್ಲ: ಯತ್ನಾಳ್

ABOUT THE AUTHOR

...view details