ಪುತ್ತೂರು (ದಕ್ಷಿಣ ಕನ್ನಡ):ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಮಳೆಯ ಕಾರಣದಿಂದಾಗಿ ಹಲವು ಕಡೆಗಳಲ್ಲಿ ಹೊಂಡ-ಗುಂಡಿಗಳು ನಿರ್ಮಾಣಗೊಂಡಿದ್ದು, ಮಳೆ ಕಡಿಮೆಯಾದ ತಕ್ಷಣವೇ ಅವುಗಳನ್ನು ದುರಸ್ತಿಪಡಿಸಲಾಗುವುದು ಎಂದು ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಮಂಗಳೂರು-ಬೆಂಗಳೂರು ಹೆದ್ದಾರಿಯ ಗುಂಡಿ ಮುಚ್ಚಲು ಸೂಚನೆ: ನಳಿನ್ ಕುಮಾರ್ ಕಟೀಲ್
ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ ಹೆದ್ದಾರಿಗಳ ಹಲವು ಕಡೆಗಳಲ್ಲಿ ಹೊಂಡ-ಗುಂಡಿಗಳು ಬಿದ್ದಿದ್ದು, ಅವುಗಳನ್ನು ಮಳೆ ಕಡಿಮೆಯಾದ ತಕ್ಷಣವೇ ದುರಸ್ತಿ ಮಾಡುವಂತೆ ಹೆದ್ದಾರಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
![ಮಂಗಳೂರು-ಬೆಂಗಳೂರು ಹೆದ್ದಾರಿಯ ಗುಂಡಿ ಮುಚ್ಚಲು ಸೂಚನೆ: ನಳಿನ್ ಕುಮಾರ್ ಕಟೀಲ್ BJP State President Nalin Kumar Kateel Statement](https://etvbharatimages.akamaized.net/etvbharat/prod-images/768-512-8565033-604-8565033-1598439541953.jpg)
ಪುತ್ತೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ ಹೆದ್ದಾರಿಗಳ ಕೆಲವು ಕಡೆಗಳಲ್ಲಿ ಹೊಂಡ-ಗುಂಡಿಗಳು ಬಿದ್ದಿದ್ದು, ಅವುಗಳನ್ನು ಮಳೆ ಕಡಿಮೆಯಾದ ತಕ್ಷಣವೇ ದುರಸ್ತಿ ಮಾಡುವಂತೆ ಹೆದ್ದಾರಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ರಸ್ತೆಗೆ ಡಾಂಬರೀಕರಣ ಮಾಡುವ ಎಲ್ಲಾ ಪ್ಲಾಂಟ್ಗಳು ಸೆಪ್ಟಂಬರ್ ಬಳಿಕವೇ ಕಾರ್ಯಾಚರಣೆ ನಡೆಸುವುದರಿಂದ ತಕ್ಷಣಕ್ಕೆ ಮರು ಡಾಂಬರೀಕರಣ ಮಾಡುವುದು ಸಾಧ್ಯವಿಲ್ಲ ಎಂದರು.
ಬಿ.ಸಿ.ರೋಡ್ನಿಂದ ಅಡ್ಡಹೊಳೆವರೆಗಿನ ಹೆದ್ದಾರಿಯನ್ನು ಚತುಷ್ಪಥ ಮಾಡುವ ಕಾಮಗಾರಿ ಕೆಲವು ಕಾನೂನಾತ್ಮಕ ಸಮಸ್ಯೆಯಿಂದ ನಿಂತಿದೆ. ಇದೀಗ ಮತ್ತೆ ಮರು ಟೆಂಡರ್ ಕರೆಯಲಾಗಿದ್ದು, ಸದ್ಯದಲ್ಲೇ ಈ ಕಾಮಗಾರಿಯೂ ಆರಂಭಗೊಳ್ಳಲಿದೆ ಎಂದರು.