ಕರ್ನಾಟಕ

karnataka

ETV Bharat / city

ಜ.6 ರಂದು ಬಂಟ್ವಾಳದಲ್ಲಿ ಕಾಂಗ್ರೆಸ್ ವಿಭಾಗೀಯ ಪ್ರತಿನಿಧಿ ಸಮ್ಮೇಳನ : ಡಿಕೆಶಿ, ಸಿದ್ದರಾಮಯ್ಯ ಭಾಗಿ - ಬಂಟ್ವಾಳ ಕಾಂಗ್ರೆಸ್ ವಿಭಾಗೀಯ ಪ್ರತಿನಿಧಿ ಸಮ್ಮೇಳನ

ಮೈಸೂರು ವಿಭಾಗ ಮಟ್ಟದ ಈ ಪ್ರತಿನಿಧಿ ಸಮ್ಮೇಳನದಲ್ಲಿ ಮೈಸೂರು, ಚಾಮರಾಜನಗರ, ದ.ಕ., ಉಡುಪಿ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯ ಜನಪ್ರತಿನಿಧಿಗಳು ಭಾಗಿಯಾಗಲಿದ್ದಾರೆ..

congress-divisional-representative-conference-at-bantwal
ಕಾಂಗ್ರೆಸ್ ವಿಭಾಗೀಯ ಪ್ರತಿನಿಧಿ ಸಮ್ಮೇಳನ

By

Published : Jan 2, 2021, 6:50 PM IST

ಮಂಗಳೂರು : ಜ.6ರಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಕಾಂಗ್ರೆಸ್ ಪಕ್ಷದ ಪ್ರಥಮ ವಿಭಾಗಿಯ ಪ್ರತಿನಿಧಿ ಸಮ್ಮೇಳನ ನಡೆಯಲಿದ್ದು, ಇದರಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಮೊದಲಾದವರು ಪಾಲ್ಗೊಳ್ಳಲಿದ್ದಾರೆ ಎಂದು ಮಾಜಿ ಸಚಿವ ಬಿ. ರಮಾನಾಥ್ ರೈ ಹೇಳಿದರು.

ಮಂಗಳೂರಿನಲ್ಲಿ ಮಾತನಾಡಿದ ಅವರು, ಮೈಸೂರು ವಿಭಾಗ ಮಟ್ಟದ ಪ್ರತಿನಿಧಿ ಸಮ್ಮೇಳನವು ಬಿಸಿ ರೋಡಿನಲ್ಲಿ ನಡೆಯಲಿದೆ. ಪ್ರತಿನಿಧಿ ಸಮ್ಮೇಳನದಲ್ಲಿ 677 ಮಂದಿ ಆಹ್ವಾನಿತ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 11ಗಂಟೆಗೆ ಆರಂಭವಾಗುವ ಈ ಪ್ರತಿನಿಧಿ ಸಮ್ಮೇಳನ ಸಂಜೆ 7.30ರವರೆಗೆ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಜ.6 ರಂದು ಬಂಟ್ವಾಳದಲ್ಲಿ ಕಾಂಗ್ರೆಸ್ ವಿಭಾಗೀಯ ಪ್ರತಿನಿಧಿ ಸಮ್ಮೇಳನ

ಓದಿ-ಜೈಲಿನಲ್ಲಿ ಮೂರು ವರ್ಷದ ಮಗು ಸಾವು : ಲಾಕ್‌ಅಪ್​ ಡೆತ್​ ಆರೋಪ

ಈ ಸಮ್ಮೇಳನದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಸಲೀಂ ಅಹ್ಮದ್, ಈಶ್ವರ ಖಂಡ್ರೆ, ಸತೀಶ್ ಜಾರಕಿಹೊಳಿ ಸೇರಿದಂತೆ ಮತ್ತಿತರ ಮುಖಂಡರು ಭಾಗವಹಿಸಲಿದ್ದಾರೆ.

ಮೈಸೂರು ವಿಭಾಗ ಮಟ್ಟದ ಈ ಪ್ರತಿನಿಧಿ ಸಮ್ಮೇಳನದಲ್ಲಿ ಮೈಸೂರು, ಚಾಮರಾಜನಗರ, ದ.ಕ., ಉಡುಪಿ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯ ಜನಪ್ರತಿನಿಧಿಗಳು ಭಾಗಿಯಾಗಲಿದ್ದಾರೆ ಎಂದು ಅವರು ತಿಳಿಸಿದರು.

ABOUT THE AUTHOR

...view details