ಕರ್ನಾಟಕ

karnataka

ETV Bharat / city

ದಕ್ಷಿಣಕನ್ನಡ ಸಹಕಾರಿ ಧುರೀಣರಿಂದ ರಾಮ ಮಂದಿರ ನಿರ್ಮಾಣಕ್ಕೆ 1 ಕೋಟಿ ರೂ.ದೇಣಿಗೆ - cooperative leaders s donate Rs 1 crore for construction of Ram Mandir

ದಕ್ಷಿಣಕನ್ನಡ ಜಿಲ್ಲೆಯ ಸಹಕಾರಿ ಧುರೀಣರು ಶ್ರೀರಾಮ ಮಂದಿರ ನಿರ್ಮಾಣಕ್ಕೆ ಒಂದು ಕೋಟಿಗೂ ಅಧಿಕ ಹಣ ದೇಣಿಗೆ ನೀಡಲು ನಿರ್ಧರಿಸಿದ್ದಾರೆ. ಫೆಬ್ರವರಿ 24ರಂದು ಪೇಜಾವರ ಶ್ರೀಗಳಿಗೆ ನಿಧಿ ಸಮರ್ಪಣೆ ಮಾಡಲಾಗುವುದು ಎಂದು ದೇವಿಪ್ರಸಾದ್ ಶೆಟ್ಟಿ ತಿಳಿಸಿದ್ದಾರೆ.

Ram Mandir donation
ದಕ್ಷಿಣಕನ್ನಡ ಸಹಕಾರಿ ಧುರೀಣರಿಂದ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ

By

Published : Feb 21, 2021, 9:13 AM IST

ಮಂಗಳೂರು:ದಕ್ಷಿಣಕನ್ನಡ ಜಿಲ್ಲೆಯ ಸಹಕಾರಿ ಧುರೀಣರು ಶ್ರೀರಾಮ ಮಂದಿರ ನಿರ್ಮಾಣಕ್ಕೆ ಒಂದು ಕೋಟಿಗೂ ಅಧಿಕ ದೇಣಿಗೆ ನೀಡಲು ನಿರ್ಧರಿಸಿದ್ದಾರೆ ಎಂದು ಗುರುವಂದನಾ ಸಮಿತಿ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಬೆಳಪು ಹೇಳಿದರು.

ದಕ್ಷಿಣಕನ್ನಡ ಸಹಕಾರಿ ಧುರೀಣರಿಂದ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ

ನಗರದ ಎಸ್​​ಸಿಡಿಸಿಸಿ ಬ್ಯಾಂಕ್​​ನಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಉಡುಪಿ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರಿಗೆ ಗುರುವಂದನೆ, ಶ್ರೀರಾಮ ಮಂದಿರ ನಿರ್ಮಾಣಕ್ಕೆ ನಿಧಿ ಸಮರ್ಪಣೆ ಮತ್ತು ಸಹಕಾರ ರತ್ನ ಡಾ. ಎಂ.ಎನ್​.ರಾಜೇಂದ್ರ ಕುಮಾರ್ ಅವರ 72ನೇ ಹುಟ್ಟುಹಬ್ಬ ಸಂಭ್ರಮವು ಫೆಬ್ರವರಿ 24ರಂದು ನಡೆಯಲಿದೆ. ಅಂದೇ ಪೇಜಾವರ ಶ್ರೀಗಳಿಗೆ ನಿಧಿ ಸಮರ್ಪಣೆ ಮಾಡಲಾಗುವುದು ಎಂದರು.

ಓದಿ:ದಾವಣಗೆರೆಯಲ್ಲಿ ಭೂಗಳ್ಳರ ಹಾವಳಿ: ಅಕ್ರಮ ಕಟ್ಟಡಗಳನ್ನು ತೆರವುಗೊಳಿಸಿದ ದೂಡಾ ಅಧಿಕಾರಿಗಳು

ಜಿಲ್ಲೆಯ ಸಹಕಾರಿ ಕ್ಷೇತ್ರದಲ್ಲಿರುವ ಎಲ್ಲರೂ ಸೇರಿ ಒಂದು ಕೋಟಿಗೂ ಅಧಿಕ ದೇಣಿಗೆ ನೀಡಲಿದ್ದಾರೆ. ಎಸ್​​ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್​.ರಾಜೇಂದ್ರ ಕುಮಾರ್ ತಮ್ಮ ವೈಯಕ್ತಿಕ ನಿಧಿಯಿಂದ 5 ಲಕ್ಷ, ನವೋದಯ ಚಾರಿಟೇಬಲ್ ಟ್ರಸ್ಟ್​​ನಿಂದ 5 ಲಕ್ಷ ದೇಣಿಗೆ ನೀಡುತ್ತಿದ್ದಾರೆ ಎಂದು ತಿಳಿಸಿದರು.

For All Latest Updates

ABOUT THE AUTHOR

...view details