ಮಂಗಳೂರು: ನಗರದ ಬೊಂದೇಲ್ನಲ್ಲಿರುವ ಬಾಲಕರ ಬಾಲ ಮಂದಿರದಲ್ಲಿ ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಗೆ ಸೇರಿದ 6 ರಿಂದ 17 ವರ್ಷದೊಳಗಿನ 13 ಅನಾಥ ಮಕ್ಕಳಿದ್ದಾರೆ. ಈ ಮಕ್ಕಳನ್ನು ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ನಿನ್ನೆ ಪಿಲಿಕುಳ ನಿಸರ್ಗಧಾಮಕ್ಕೆ ಪ್ರವಾಸಕ್ಕೆಂದು ಕರೆದೊಯ್ದರು.
ಈ ಮಕ್ಕಳಿಗೆ ಪೋಷಕರಿಲ್ಲದ ನೋವು ಕಾಡಬಾರದೆಂಬ ಉದ್ದೇಶದಿಂದ ಪಿಲಿಕುಳ ನಿಸರ್ಗಧಾಮಕ್ಕೆ ಪ್ರವಾಸಕ್ಕೆ ಕರೆದೊಯ್ಯಲಾಗಿತ್ತು. ಸ್ವತಃ ಜಿಲ್ಲಾಧಿಕಾರಿಯವರೇ ಮಕ್ಕಳ ಪ್ರವಾಸಕ್ಕೆ ಬೇಕಾದ ಊಟ-ಉಪಹಾರ ಹಾಗೂ ವಾಹನದ ವ್ಯವಸ್ಥೆ ಕಲ್ಪಿಸಿದ್ದರು. ಸಂಜೆ ವೇಳೆಗೆ ಪಿಲಿಕುಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ, ಮಕ್ಕಳೊಂದಿಗೆ ಕಾಲಕಳೆದು ಸಂವಾದ ನಡೆಸಿದರು.
ಇದನ್ನೂ ಓದಿ:ಪಿಲಿಕುಳ ಜೈವಿಕ ಉದ್ಯಾನವನಕ್ಕೆ ಹೊಸ ಅತಿಥಿಯ ಆಗಮನ!