ಕರ್ನಾಟಕ

karnataka

ಸುಳ್ಯ: ಕತ್ತು ಕೊಯ್ದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

By

Published : Apr 17, 2021, 9:10 AM IST

ದಕ್ಷಿಣಕನ್ನಡ ಜಿಲ್ಲೆಯ ಸುಳ್ಯದ ಕೆಎಸ್​ಆರ್​ಟಿಸಿ ಬಸ್ ನಿಲ್ದಾಣದ ಹಿಂಬದಿಯಲ್ಲಿ ಶುಕ್ರವಾರ ರಾತ್ರಿ ಕತ್ತು ಕೊಯ್ದ ಸ್ಥಿತಿಯಲ್ಲಿ ವ್ಯಕ್ತಿವೋರ್ವನ ಮೃತದೇಹ ಪತ್ತೆಯಾಗಿದೆ.

Dead body found
ಕತ್ತು ಕೊಯ್ದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಸುಳ್ಯ (ದಕ್ಷಿಣಕನ್ನಡ):ಸುಳ್ಯದ ಕೆಎಸ್​ಆರ್​ಟಿಸಿ ಬಸ್ ನಿಲ್ದಾಣದ ಹಿಂಬದಿಯಲ್ಲಿ ಶುಕ್ರವಾರ ರಾತ್ರಿ ಕತ್ತು ಕೊಯ್ದ ಸ್ಥಿತಿಯಲ್ಲಿ ವ್ಯಕ್ತಿವೋರ್ವನ ಮೃತದೇಹ ಪತ್ತೆಯಾಗಿದೆ.

ಬಸ್ ನಿಲ್ದಾಣದ ಸಿಬ್ಬಂದಿ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದರು. ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು, ಮೃತದೇಹದ ಬಳಿಯಿದ್ದ ಬ್ಯಾಗ್ ಪರಿಶೀಲಿಸಿದಾಗ ಆಧಾರ್ ಕಾರ್ಡ್ ಸಿಕ್ಕಿದೆ. ಮೃತ ವ್ಯಕ್ತಿ ಮಂಗಳೂರಿನ ಅಚ್ಚುತ ಎಂಬ ಮಾಹಿತಿ ದೊರೆತಿದೆ.

ಸದ್ಯ ಮೃತದೇಹವನ್ನು ಸುಳ್ಯದ ಕೆ.ವಿ.ಜಿ. ಆಸ್ಪತ್ರೆಯ ಶವಾಗಾರದಲ್ಲಿ ಇರಿಸಿದ್ದು, ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದರ ಕುರಿತು ತನಿಖೆ ನಡೆಯುತ್ತಿದೆ.

ಓದಿ:ಮನೆಮಂದಿ ನಾಟಕ ನೋಡಲು ಹೋಗಿದ್ದಾಗ ಕಳ್ಳರ ಕೈಚಳಕ: ನಾಲ್ಕು ಮನೆಗಳ ದರೋಡೆ!

ABOUT THE AUTHOR

...view details