ಕರ್ನಾಟಕ

karnataka

ಕಾಂಗ್ರೆಸ್​ನಿಂದ ಡೆಂಘೀ ನಿಯಂತ್ರಣ ಜಾಗೃತಿ ಅಭಿಯಾನ..

By

Published : Aug 5, 2019, 11:24 PM IST

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಉಲ್ಬಣಗೊಂಡಿರುವ ಡೆಂಘೀ ಕಾಯಿಲೆ ಕುರಿತು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಮಂಗಳೂರು ನಗರ ಬ್ಲಾಕ್ ಸಮಿತಿ ಕಾರ್ಯಕರ್ತರು ಡೆಂಘೀ ನಿಯಂತ್ರಣ ಜಾಗೃತಿ ಅಭಿಯಾನ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಿದ್ದಾರೆ.

Dengue Control Awareness Campaign from Congress

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಉಲ್ಬಣಗೊಂಡಿರುವ ಡೆಂಘೀ ಕಾಯಿಲೆ ಹಲವು ಜೀವಗಳನ್ನು ಬಲಿ ತೆಗೆದುಕೊಂಡಿದೆ. ಇನ್ನೂ ಹಲವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಮಂಗಳೂರು ನಗರ ಬ್ಲಾಕ್ ಸಮಿತಿ ಕಾರ್ಯಕರ್ತರು ಡೆಂಘೀ ನಿಯಂತ್ರಣ ಜಾಗೃತಿ ಅಭಿಯಾನ ಕಾರ್ಯಕ್ರಮ ಇಂದು ನಗರದ ಮಲ್ಲಿಕಟ್ಟೆಯ ದ.ಕ.ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.

ಈ ವೇಳೆ ಮಾತನಾಡಿದ ನಿವೃತ್ತ ಜಿಲ್ಲಾ ಆರೋಗ್ಯಾಧಿಕಾರಿ ಜಯರಾಮ್, 'ಡೆಂಘೀವಿನಲ್ಲಿ ನಾಲ್ಕು ವಿಧದ ವೈರಸ್​ಗಳಿವೆ. ಇದು ಡೆಂಘೀ ಸಾಮಾನ್ಯ ಜ್ವರ, ರಕ್ತಸ್ರಾವ ಜ್ವರ ಹಾಗೂ ಪ್ರಜ್ಞೆ ತಪ್ಪುವ ಜ್ವರ. ಸಾಮಾನ್ಯ ಜ್ವರಕ್ಕಿಂತ ಉಳಿದೆರಡು ಜ್ವರಗಳು ತುಂಬಾ ಅಪಾಯಕಾರಿ. ಅಪಾಯಕಾರಿ ಜ್ವರದ ಲಕ್ಷಣಗಳು ಕಂಡು ಬಂದಲ್ಲಿ ಚಿಕಿತ್ಸೆ ಪಡೆಯಲು ಮುಂದಾಗಬೇಕು. ಒಂದು ವೇಳೆ ಚಿಕಿತ್ಸೆ ತೆಗೆದುಕೊಳ್ಳಲು ಹಿಂಜರಿದರೆ ಸಾವು ಸಂಭವಿಸುವ ಸಾಧ್ಯತೆಗಳೂ ಹೆಚ್ಚಿದೆ ಎಂದು ಎಚ್ಚರಿಸಿದರು.

ನಿವೃತ್ತ ಜಿಲ್ಲಾ ಆರೋಗ್ಯಾಧಿಕಾರಿ ಜಯರಾಮ್
ನಮ್ಮ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕು. ಸ್ವಚ್ಛವಾಗಿಟ್ಟುಕೊಳ್ಳಬೇಕು. ಇದರಿಂದ ರೋಗ ಹರಡುವ ಪ್ರಮಾಣ ತನ್ನಿಂದ ತಾನಾಗಿಯೇ ಕಡಿಮೆ ಆಗಲಿದೆ. ಅಲ್ಲದೆ, ಡೆಂಘೀ ಮುಕ್ತವಾಗಲು ಸೊಳ್ಳೆಗಳಿಗೆ ಕಡಿವಾಣ ಹಾಕಬೇಕು. ಸೊಳ್ಳೆ ಪರದೆ ಬಳಸುವುದು ಸೇರಿದಂತೆ ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಯಾರೂ ನಿರ್ಲಕ್ಷ್ಯ ತೋರಬಾರದು ಎಂದು ಹೇಳಿದರು.ತೀವ್ರ ಜ್ವರ, ತಲೆನೋವು, ಕಣ್ಣುಗುಡ್ಡೆ ನೋವು, ರಕ್ತಸ್ರಾವ, ಕಣ್ಣು ಕೆಂಪಾಗುವುದು, ಮಾಂಸಖಂಡಗಳ ನೋವು ಮತ್ತು ಕೀಲು ನೋವು ಡೆಂಘೀ ಜ್ವರದ ಲಕ್ಷಣಗಳು. ಇಂತಹ ಲಕ್ಷಣಗಳು ಕಂಡು ಬಂದಲ್ಲಿ ಕೂಡಲೇ ಚಿಕಿತ್ಸೆ ಪಡೆಯಬೇಕು ಎಂದು ಸಲಹೆ ನೀಡಿದರು. ಈ ಸಂದರ್ಭ ಮಾಜಿ ಶಾಸಕ ಜೆ.ಆರ್.ಲೋಬೊ, ಕಾಂಗ್ರೆಸ್ ಮುಖಂಡರಾದ ಟಿ.ಕೆ.ಸುಧೀರ್, ವಿಶ್ವಾಸ್ ಕುಮಾರ್ ದಾಸ್ ಮತ್ತಿತರರು ಇದ್ದರು.

ABOUT THE AUTHOR

...view details