ಮಂಗಳೂರು: ಕರಾವಳಿಯ ಅಭಿವೃದ್ಧಿಗಾಗಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡಬೇಕೆಂದು ಆಯವ್ಯಯ ಸಭೆಯಲ್ಲಿ ಸಿಎಂ ಗಮನಕ್ಕೆ ತಂದಿದ್ದೇನೆ. ಆದ್ದರಿಂದ ತ್ವರಿತ ಗತಿಯಲ್ಲಿ ಮೂಲಸೌಕರ್ಯ ವ್ಯವಸ್ಥೆ ಮಾಡಲು, ಉತ್ತರ ಕನ್ನಡ ಜಿಲ್ಲೆಯ ಬೆಳಗೇರಿ, ಕಾರವಾರ ಹಾಗೂ ತಡದಿಗೆ ಸಂಪರ್ಕ ಕೊಂಡಿಯನ್ನು ನಿರ್ಮಾಣ ಮಾಡಬೇಕೆಂದು ಸಭೆಯಲ್ಲಿ ಚರ್ಚೆಯಾಗಿದೆ ಎಂದು ಕರ್ನಾಟಕ ರಾಜ್ಯ ಯೋಜನಾ ಮಂಡಳಿಯ ಉಪಾಧ್ಯಕ್ಷ ಬಿ. ಜೆ.ಪುಟ್ಟಸ್ವಾಮಿ ಹೇಳಿದರು.
ನಗರದ ಖಾಸಗಿ ಹೊಟೇಲ್ನಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಯೋಜನೆಗೆ ಸಾಕಷ್ಟು ಹಣವನ್ನು ಮೀಸಲಿರಿಸಲಾಗಿದೆ. ಮೊದಲನೆಯದಾಗಿ ಅಲ್ಲಿನ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು. ಅಲ್ಲದೆ ಕೊಂಕಣ ರೈಲ್ವೆಯಿಂದ ಬಂದರು ಪ್ರದೇಶಕ್ಕೆ ಸಂಪರ್ಕ ಮಾರ್ಗ ನಿರ್ಮಾಣ ಮಾಡುವುದು. ಅದೇ ರೀತಿ ವಾಯು ಸಂಪರ್ಕವನ್ನು ಆದಷ್ಟು ಬೇಗ ನಿರ್ಮಿಸಲಾಗುವುದು ಎಂದು ತಿಳಿಸಿದರು.
ಕರಾವಳಿ ಜಿಲ್ಲೆಗಳ ಅಭಿವೃದ್ಧಿ: