ಮಂಗಳೂರು :ಬಜರಂಗದಳ ಮುಖಂಡ ಶರಣ್ ಪಂಪ್ವೆಲ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಕಳೆದ ಒಂದು ತಿಂಗಳಿನಿಂದ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದಾರೆಂದು ಅಪಪ್ರಚಾರ ಮಾಡಲಾಗುತ್ತಿದೆ. ಈ ಬಗ್ಗೆ ಪೊಲೀಸ್ ಇಲಾಖೆ ತಕ್ಷಣ ಕ್ರಮ ಜರುಗಿಸಬೇಕು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಲಾಗಿದೆ.
ಈ ದೂರಿನ ಆಧಾರದಲ್ಲಿ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಕಲಿ ಫೇಸ್ಬುಕ್ ಖಾತೆಗಳನ್ನು ತೆರೆದು ಅಪಪ್ರಚಾರ ಮಾಡಲಾಗುತ್ತಿದ್ದು, ಕೆಲಸದ ಆಮಿಷ ನೀಡಿ ಅಮಾಯಕ ಹಿಂದೂ ಯುವತಿಯರನ್ನು ಮುಸ್ಲಿಂ ಮತ್ತು ಕ್ರಿಶ್ಚಿಯನ್ ಯುವಕರಿಂದ ಅತ್ಯಾಚಾರ ಮಾಡಿಸಲಾಗುತ್ತಿದೆ ಎಂದು ನಕಲಿ ಖಾತೆಯೊಂದರಲ್ಲಿ ಹಿಂದೂ ಯುವತಿಯ ಸೋಗಿನಲ್ಲಿ ಅಪಪ್ರಚಾರ ಮಾಡಲಾಗುತ್ತಿದೆ.