ಕರ್ನಾಟಕ

karnataka

By

Published : Dec 6, 2021, 12:28 PM IST

ETV Bharat / city

ಅಂಗಡಿಯಲ್ಲಿ ಕುಳಿತಿದ್ದ ಯುವಕರ ಮೇಲೆ ತಲವಾರಿನಿಂದ ದಾಳಿ : ಐದು ಮಂದಿ ಆಸ್ಪತ್ರೆಗೆ ದಾಖಲು

ಗಾಯಾಳುಗಳು ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿರುವುದಾಗಿ ತಿಳಿದು ಬಂದಿದೆ. ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ತೆರಳಿ ಮಾಹಿತಿ ಕಲೆ ಹಾಕಿ ಪ್ರಕರಣ ದಾಖಲಿಸಿಕೊಂಡಿದ್ದಾರೆ..

fatal-attack-on-youth-in-uppinangady
ತಲವಾರಿನಿಂದ ದಾಳಿ

ಉಪ್ಪಿನಂಗಡಿ :ಯುವಕರ ಮೇಲೆ ಗುಂಪೊಂದು ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಿನ್ನೆ ಸಂಜೆ ಇಳಂತಿಲ ಗ್ರಾಮದ ಅಂಡೆತಡ್ಕ ಎಂಬಲ್ಲಿ ನಡೆದಿದೆ.

ಇಲ್ಲಿನ ಅಂಗಡಿಯೊಂದರ ಬದಿಯಲ್ಲಿ ನಿನ್ನೆ ಸಂಜೆ ಸುಮಾರು 7 ಗಂಟೆಗೆ ಸ್ಥಳೀಯ ನಿವಾಸಿಗಳಾದ ಫಯಾಝ್ (26) ಹಾಗೂ ಆಫೀಝ್ (19) ಎಂಬುವರು ಕುಳಿತುಕೊಂಡಿದ್ದರು.

ಈ ವೇಳೆ ಅಲ್ಲಿಗೆ ಬಂದ 4-5 ಮಂದಿ ಇದ್ದ ತಂಡ ಏಕಾಏಕಿ ತಲವಾರಿನಿಂದ ದಾಳಿ ನಡೆಸಿದೆ ಎನ್ನಲಾಗಿದೆ. ಗಾಯಗೊಂಡ ಫಯಾಝ್ ಹಾಗೂ ಆಫೀಜ್ ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಲ್ಲದೆ, ಘಟನೆಯ ಬಳಿಕ ರಾತ್ರಿ ಸುಮಾರು 8.30ರ ವೇಳೆಗೆ 30 ರಿಂದ 40 ಮಂದಿ ಬೈಕ್‌ಗಳಲ್ಲಿ ಬಂದು, ಅಂಗಡಿಯಲ್ಲಿ ಕುಳಿದುಕೊಂಡಿದ್ದ ಸಿದ್ದೀಕ್, ಅಯ್ಯಬ್, ಝಕಾರಿಯಾ ಎಂಬುವರ ಮೇಲೆ ತಲವಾರಿನಿಂದ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ.

ಗಾಯಾಳುಗಳು ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿರುವುದಾಗಿ ತಿಳಿದು ಬಂದಿದೆ. ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ತೆರಳಿ ಮಾಹಿತಿ ಕಲೆ ಹಾಕಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ABOUT THE AUTHOR

...view details