ಕರ್ನಾಟಕ

karnataka

ETV Bharat / city

ಕಾಳಿ ಸ್ವಾಮಿಯಿಂದ ಅನಾಗರಿಕ ವರ್ತನೆ : ಕುಮಾರಸ್ವಾಮಿ ಕಿಡಿ

ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸದಲ್ಲಿರುವ ಹೆಚ್​ ಡಿ ಕುಮಾರಸ್ವಾಮಿ- ಜಿಲ್ಲೆಯಲ್ಲಿ ಹತ್ಯೆಯಾದ ಅಮಾಯಕರ ಮನೆಗೆ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ - ಕಾಳಿ ಸ್ವಾಮೀಜಿ ವಿರುದ್ಧ ಕಿಡಿ

By

Published : Aug 1, 2022, 3:41 PM IST

H D Kumaraswamy
ಕುಮಾರಸ್ವಾಮಿ

ಪುತ್ತೂರು(ದಕ್ಷಿಣ ಕನ್ನಡ) :ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸೋಮವಾರ ಪುತ್ತೂರಿನ ನೆಹರುನಗರದ ಮಾಸ್ಟರ್ ಪ್ಲಾನರಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಭಾಗದ ಗ್ರಾಮೀಣ ಪ್ರದೇಶದ ಬಡ ಮಹಿಳೆಯರಿಗೆ ಉದ್ಯೋಗ ನೀಡುವಲ್ಲಿ, ಸಾವಿರಕ್ಕೂ ಅಧಿಕ ಕುಟುಂಬಗಳ ಭದ್ರತೆಗೆ ಕಾರಣವಾದ ಮಾಸ್ಟರ್ ಪ್ಲಾನರಿಯಂತಹ ಸಂಸ್ಥೆ ಮೆಚ್ಚುಗೆಗೆ ಪಾತ್ರವಾಗಿದೆ. ಈ ನಿಟ್ಟಿನಲ್ಲಿ ಸಂಸ್ಥೆಗೆ ಭೇಟಿ ನೀಡಿದ್ದೇನೆ ಎಂದು ತಿಳಿಸಿದರು.

ಕಾಳಿಸ್ವಾಮಿ ಅವರ ಹೇಳಿಕೆಯ ಬಗ್ಗೆ ಮಾತನಾಡಿ, ಹತ್ಯೆ ಮಾಡಿದವರ ತಲೆ ಕಡಿಯುತ್ತೇವೆ ಎಂದು ಪ್ರತಿಕ್ರಿಯಿವುದು ಸ್ವಾಮೀಜಿಗಳ ಲಕ್ಷಣವಲ್ಲ. ಸ್ವಾಮೀಜಿಗಳು ಅನಾಗರಿಕರಂತೆ ವರ್ತಿಸುತ್ತಿದ್ದಾರೆ. ಸಮಾಜದ ಕಲುಷಿತ ವಾತಾವರಣಕ್ಕೆ ಕಾರಣಕರ್ತರಾಗಿದ್ದಾರೆ ಎಂದು ಕಿಡಿಕಾರಿದರು.

ಕಾಳಿ ಸ್ವಾಮೀಯಿಂದ ಅನಾಗರಿಕ ವರ್ತನೆ

ಜಿಲ್ಲೆಯಲ್ಲಿ ಹತ್ಯೆಗೀಡಾದ ಅಮಾಯಕರ ಮನೆಗಳಿಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದ ಕುಮಾರಸ್ವಾಮಿ ಧೈರ್ಯ ತುಂಬಿದರು. ಈ ಪ್ರಕರಣಗಳಿಗೆ ಕಾರಣವೇನು ಎಂಬುದರ ಕುರಿತು ಕೂಲಂಕಷ ತನಿಖೆ ಮಾಡಬೇಕು. ನಿಜವಾದ ಆರೋಪಿಗಳನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಮಾಹಿತಿ ಸಂಗ್ರಹಿಸಿ ಸರ್ಕಾರಕ್ಕೆ ಒತ್ತಡ ತರಲಾಗುವುದು ಎಂದರು.

ಈ ಸಂದರ್ಭದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ, ವಿಧಾನ ಪರಿಷತ್ ಸದಸ್ಯರಾದ ಬಿ.ಎಂ. ಫಾರೂಕ್, ಭೋಜೇಗೌಡ, ಜೆಡಿಎಸ್ ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ ಮತ್ತಿತರ ಜೆಡಿಎಸ್​ ಮುಖಂಡರಿದ್ದರು.

ಇದನ್ನೂ ಓದಿ :Praveen Murder case: ಎನ್​​ಐಎ ಕಾಟಾಚಾರಕ್ಕೆ ತನಿಖೆ ಮಾಡಬಾರದು.. ಹೆಚ್​ಡಿಕೆ

ABOUT THE AUTHOR

...view details