ಸುಳ್ಯ(ದಕ್ಷಿಣ ಕನ್ನಡ):ಸುಳ್ಯದ ಬೆಳ್ಳಾರೆಯಲ್ಲಿ ಕೊಲೆಯಾದ ಪ್ರವೀಣ್ ನೆಟ್ಟಾರು ಮನೆಗೆ ಬಿಜೆಪಿ ಪಕ್ಷದ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿ, ಪ್ರವೀಣ್ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿರುವ ಅವರು, ಪ್ರವೀಣ್ ಕುಟುಂಬ ಸದಸ್ಯರಿಗೆ ಸರ್ಕಾರಿ ನೌಕರಿ ನೀಡುವ ಬಗ್ಗೆ ಸರ್ಕಾರದ ಗಮನ ಸೆಳೆಯುತ್ತೇನೆ ಎಂದು ಭರವಸೆ ಕೊಟ್ಟರು.
ಮುಖ್ಯಮಂತ್ರಿ ಹಾಗೂ ಗೃಹಮಂತ್ರಿಗಳು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಎಸ್ಡಿಪಿಐ, ಪಿಎಫ್ಐ ಸಂಘಟನೆ, ಯಾರೇ ಇದರಲ್ಲಿ ಇದ್ದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಮುಂದೆ ಇಂತಹ ಕೃತ್ಯಗಳು ರಾಜ್ಯದಲ್ಲಿ ಬೇರೆಲ್ಲೂ ಆಗಬಾರದು. ಈ ಕುಟುಂಬಕ್ಕೆ ಬಂದ ಸ್ಥಿತಿ ಯಾವುದೇ ಶತ್ರುಗಳಿಗೂ ಬರಬಾರದು ಎಂದರು.