ಸುಬ್ರಹ್ಮಣ್ಯ :"ಸುರಕ್ಷತೆಯ ಪ್ರಯಾಣ ನಮ್ಮೆಲ್ಲರ ಆದ್ಯತೆಯಾಗಿರಲಿ" ಎಂಬ ಘೋಷವಾಕ್ಯದಡಿ ಸಂಚಾರ ನಿಯಂತ್ರಣ ಹಾಗೂ ಸುರಕ್ಷತಾ ಸಪ್ತಾಹ 2020 ಕಾರ್ಯಕ್ರಮವು ಠಾಣಾಧಿಕಾರಿ ಓಮನಾ ಅವರ ನೇತೃತ್ವದಲ್ಲಿ ನಗರದಲ್ಲಿ ನಡೆಯಿತು.
ಕುಕ್ಕೆ ಸುಬ್ರಹ್ಮಣ್ಯದಲ್ಲಿ ರಸ್ತೆ ಸುರಕ್ಷಾ ಸಪ್ತಾಹ ಕಾರ್ಯಕ್ರಮ
ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ದ ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯದಲ್ಲಿಸಂಚಾರ ನಿಯಂತ್ರಣ ಹಾಗೂ ಸುರಕ್ಷತಾ ಸಪ್ತಾಹ 2020 ಕಾರ್ಯಕ್ರಮವು ಠಾಣಾಧಿಕಾರಿ ಓಮನಾ ಅವರ ನೇತೃತ್ವದಲ್ಲಿ ನಗರದಲ್ಲಿ ನಡೆಯಿತು.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ರಥಬೀದಿಯಲ್ಲಿ ಪಥಸಂಚಲನ ನಡೆಸಿದ ವಿದ್ಯಾರ್ಥಿಗಳು ಮತ್ತು ಪೊಲೀಸರು ಕರಪತ್ರಗಳನ್ನು ಹಿಡಿದು, ನಿಮಗೊಂದು ಕುಟುಂಬ ಇದೆ, ಅಲ್ಲಿ ನಿಮ್ಮ ಬರುವಿಕೆಗೆ ಕಾಯುತ್ತಿರುತ್ತಾರೆ. ರಸ್ತೆ ನಿಯಮಗಳನ್ನು ಪಾಲಿಸಿ. ನಿರ್ಲಕ್ಷ್ಯ ಮಾಡಿದರೆ ಬದುಕು ಸಂಕಷ್ಟ ಆಗುತ್ತದೆ. ನಿಯಮಗಳನ್ನು ಪಾಲಿಸಿ, ಜೀವ ಉಳಿಸಿ ಎಂದು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯವನ್ನು ಮಾಡಿದರು.
ಮೆರವಣಿಗೆಯಲ್ಲಿ ಸುಬ್ರಹ್ಮಣ್ಯ ಪೊಲೀಸ್ ಠಾಣಾಧಿಕಾರಿ ಓಮನಾ, ಎಎಸ್ಐ ಕರುಣಾಕರ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ರಾಜೇಶ್, ಸುಬ್ರಹ್ಮಣ್ಯ ಪದವಿಪೂರ್ವ ಕಾಲೇಜು ಶಿಕ್ಷಕರು, ವಿದ್ಯಾರ್ಥಿಗಳು, ಪೊಲೀಸ್ ಸಿಬಂದಿ, ಗೃಹರಕ್ಷಕ ಸಿಬ್ಬಂದಿ ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.