ಕರ್ನಾಟಕ

karnataka

ETV Bharat / city

ಮಂಗಳೂರು: ಬಾವಿಗಿಳಿದು ಬೆಕ್ಕಿನ ಮರಿ ರಕ್ಷಿಸಿದ ರಜನಿ ಶೆಟ್ಟಿ - mangalore

ಪ್ರಾಣಿಪ್ರಿಯೆ ರಜನಿ ಶೆಟ್ಟಿ ಅವರು ಈ ಹಿಂದೆಯೂ ಸಾಕಷ್ಟು ಬಾರಿ ಬಾವಿಗೆ ಬಿದ್ದಿದ್ದ ಬೆಕ್ಕು, ನಾಯಿಗಳನ್ನು ರಕ್ಷಿಸಿದ್ದಾರೆ.

Lady Rescues cat
ಬಾವಿಗಿಳಿದು ಬೆಕ್ಕಿನ ಮರಿ ಮೇಲೆತ್ತಿರುವುದು

By

Published : Aug 9, 2021, 10:31 AM IST

Updated : Aug 9, 2021, 10:40 AM IST

ಮಂಗಳೂರು:ಪಾಳುಬಾವಿಗೆ ಬಿದ್ದು ಮೇಲೆ ಬರಲಾಗದೆ ಒದ್ದಾಡುತ್ತಿದ್ದ ಬೆಕ್ಕಿನ ಮರಿಯೊಂದನ್ನು ಮಹಿಳಾ ಪ್ರಾಣಿ ಪ್ರಿಯೆ ಸ್ವತಃ ಬಾವಿಗಿಳಿದು ರಕ್ಷಣೆ ಮಾಡಿರುವ ಘಟನೆ ನಗರದ ಜೆಪ್ಪುವಿನಲ್ಲಿ ನಡೆದಿದೆ.

ಬಾವಿಗಿಳಿದು ಬೆಕ್ಕಿನ ಮರಿ ಮೇಲೆತ್ತಿರುವ ರಜನಿ ಶೆಟ್ಟಿ

ಜೆಪ್ಪುವಿನ ಸಂದೀಪ್ ಎಂಬವರ ಮನೆಯ ಪಕ್ಕದಲ್ಲಿದ್ದ ಪಾಳು ಬಾವಿಗೆ ಬೆಕ್ಕಿನ ಮರಿ ಬಿದ್ದಿತ್ತು. ಆದರೆ ಮೇಲೆ ಬರಲಾಗದೆ ಕಲ್ಲೊಂದನ್ನು ಆಶ್ರಯಿಸಿ ಕುಳಿತಿತ್ತು‌. ಈ ಬಗ್ಗೆ ಸಂದೀಪ್ ಅವರು ಪ್ರಾಣಿ ಪ್ರಿಯೆ ರಜನಿ ಶೆಟ್ಟಿಯವರಿಗೆ ಕರೆ ಮಾಡಿದ್ದಾರೆ. ತಕ್ಷಣ ಸ್ಥಳಕ್ಕೆ ದೌಢಾಯಿಸಿದ ಅವರು ಸೊಂಟಕ್ಕೆ ಹಗ್ಗ ಬಿಗಿದು ಬಾವಿಗಿಳಿದು ಬೆಕ್ಕಿನ ಮರಿ ರಕ್ಷಿಸಿದರು.

ಮಂಗಳೂರಿನಲ್ಲಿ ಎಲ್ಲೇ ಪ್ರಾಣಿಗಳು ಬಾವಿಗೆ ಬಿದ್ದರೂ ಮೊದಲು ಕರೆ ಹೋಗುವುದು ಮಂಗಳೂರಿನ ಪ್ರಾಣಿ ಪ್ರಿಯೆ ರಜನಿ ಶೆಟ್ಟಿಯವರಿಗೆ. ಅವರು ಈ ಹಿಂದೆಯೂ ಇದೇ ರೀತಿ ಸಾಕಷ್ಟು ಬಾರಿ ಬಾವಿಗೆ ಬಿದ್ದಿದ್ದ ಬೆಕ್ಕು, ನಾಯಿಗಳನ್ನು ರಕ್ಷಿಸಿದ್ದಾರೆ. ಶ್ವಾನ ಪ್ರಿಯೆಯಾಗಿರುವ ಇವರ ಮನೆಯಲ್ಲಿ 40 ಕ್ಕಿಂತಲೂ ಅಧಿಕ ನಾಯಿಗಳಿವೆ. ಅಲ್ಲದೆ ದಿನವೂ ಸಾಕಷ್ಟು ಬೀದಿ ನಾಯಿಗಳಿಗೆ ಅನ್ನ ನೀಡುತ್ತಾರೆ.

ಇದನ್ನೂ ಓದಿ:ಭಲೇ ಧೀರೆ.. 45 ಅಡಿ ಆಳದ ಬಾವಿಗಿಳಿದು ನಾಯಿ ರಕ್ಷಿಸಿದ ಮಂಗಳೂರಿನ ಶ್ವಾನಪ್ರಿಯೆ!

Last Updated : Aug 9, 2021, 10:40 AM IST

ABOUT THE AUTHOR

...view details