ಕರ್ನಾಟಕ

karnataka

ETV Bharat / city

ಮಂಗಳೂರು : ಆಹಾರವನ್ನರಸಿಕೊಂಡು ಬಂದು ಬೋನಿಗೆ ಬಿತ್ತು ಚಿರತೆ

ಕಿನ್ನಿಗೋಳಿ-ತಾಳಿಪಾಡಿ ಪರಿಸಕ್ಕೆ ಹಲವು ತಿಂಗಳಿನಿಂದ ಚಿರತೆ ಬಂದು ಹೋಗುತ್ತಿತ್ತು. ಹಾಗಾಗಿ ಕೆಲ ದಿನಗಳ ಹಿಂದೆ ಅರಣ್ಯಾಧಿಕಾರಿಗಳು ಚಿರತೆ ಹಿಡಿಯಲು ಬೋನು ಇರಿಸಿದ್ದರು. ಇದೀಗ ಆಹಾರವನ್ನರಸಿಕೊಂಡು ಬಂದ ಚಿರತೆ ಬೋನಿಗೆ ಬಿದ್ದಿದೆ..

By

Published : Dec 26, 2021, 1:11 PM IST

Updated : Dec 26, 2021, 1:22 PM IST

Leopard captured in Mangalore
ಮಂಗಳೂರಿನಲ್ಲಿ ಚಿರತೆ ಸೆರೆ

ಮಂಗಳೂರು (ದ.ಕನ್ನಡ): ನಗರದ ಕಿನ್ನಿಗೋಳಿ ಸಮೀಪದ ತಾಳಿಪಾಡಿ ಗ್ರಾಮದ ಅಂತಲಚ್ಚಿಲ್ ನಾಗಬನದ ಗುಡ್ಡೆಯ ಬಳಿ ಆಹಾರವನ್ನರಸಿಕೊಂಡು ಬಂದಿರುವ ಚಿರತೆಯೊಂದು ಅರಣ್ಯಾಧಿಕಾರಿಗಳು ಇಟ್ಟಿದ್ದ ಬೋನಿಗೆ ಬಿದ್ದಿದೆ.

ಮಂಗಳೂರಿನಲ್ಲಿ ಚಿರತೆ ಸೆರೆ

ಕಿನ್ನಿಗೋಳಿ-ತಾಳಿಪಾಡಿ ಪರಿಸರದಲ್ಲಿ ಹಲವು ತಿಂಗಳಿನಿಂದ ಚಿರತೆಯು ಜನವಸತಿ ಪ್ರದೇಶಕ್ಕೆ ಬಂದು ಸಾಕು ನಾಯಿ ಹಾಗೂ ಇನ್ನಿತರ ಪ್ರಾಣಿಗಳನ್ನು ಹೊತ್ತೊಯ್ಯುತ್ತಿತ್ತು. ಚಿರತೆ ಜನವಸತಿ ಪ್ರದೇಶಕ್ಕೆ ಬರುತ್ತಿರುವುದು ಸಾರ್ವಜನಿಕರ ಭೀತಿಗೆ ಕಾರಣವಾಗಿತ್ತು. ಇಲ್ಲಿನ ಜನರು ರಾತ್ರಿ ವೇಳೆ ಸಂಚರಿಸಲು ಭಯಪಡುತ್ತಿದ್ದರು.

ಇದನ್ನೂ ಓದಿ:ಚಾಮರಾಜನಗರದ ಗಡಿ ಗ್ರಾಮದಲ್ಲಿ 14 ಆನೆಗಳು.. ಜಮೀನಿನಲ್ಲೇ ಬೀಡುಬಿಟ್ಟ ಗಜಪಡೆ!

ಈ ಹಿನ್ನೆಲೆ, ಸ್ಥಳೀಯರು ಚಿರತೆಯ ಬಗ್ಗೆ ಅರಣ್ಯಾಧಿಕಾರಿಗಳಿಗೆ ದೂರು ನೀಡಿದ್ದರು. ಹಾಗಾಗಿ, ಕೆಲ ದಿನಗಳ ಹಿಂದೆ ಅರಣ್ಯಾಧಿಕಾರಿಗಳು ಚಿರತೆ ಹಿಡಿಯಲು ಬೋನು ಇರಿಸಿದ್ದರು. ನಿನ್ನೆ ರಾತ್ರಿ 9 ಗಂಟೆ ವೇಳೆಗೆ ಆಹಾರ ಹುಡುಕಿ ಬಂದ ಚಿರತೆಯೊಂದು ಅರಣ್ಯಾಧಿಕಾರಿಗಳು ಇರಿಸಿದ್ದ ಬೋನಿಗೆ ಬಿದ್ದಿದೆ. ಮೂಡುಬಿದಿರೆ ವಲಯ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ, ಚಿರತೆಯನ್ನು ಕಾಡಿಗೆ ಬಿಡುವ ಕಾರ್ಯವನ್ನು ಮಾಡಿದ್ದಾರೆ.

Last Updated : Dec 26, 2021, 1:22 PM IST

ABOUT THE AUTHOR

...view details