ಕರ್ನಾಟಕ

karnataka

ETV Bharat / city

ಮಂಗಳೂರು: ಓಮ್ನಿ ಮೇಲೆ ಲಾರಿ ಪಲ್ಟಿ - ಸ್ಥಳದಲ್ಲೇ ಚಾಲಕ ಸಾವು - ಸುರತ್ಕಲ್

ಸುರತ್ಕಲ್ ಕುಳಾಯಿಯ ಹೊನ್ನಕಟ್ಟೆ ಸಿಗ್ನಲ್ ಬಳಿ ಕಾರಿನ ಮೇಲೆ ಲಾರಿ ಮಗುಚಿದ ಪರಿಣಾಮ ಕಾರಿನಲ್ಲಿದ್ದ ವ್ಯಕ್ತಿ ಸ್ಥಳದಲ್ಲೇ ಸಾವನಪ್ಪಿದ್ದಾರೆ.

mangaluru
ಲಾರಿ ಪಲ್ಟಿ

By

Published : Jul 8, 2022, 7:20 PM IST

Updated : Jul 8, 2022, 7:39 PM IST

ಮಂಗಳೂರು(ದಕ್ಷಿಣ ಕನ್ನಡ):ಸಿಗ್ನಲ್​ನಲ್ಲಿ ನಿಂತಿದ್ದ ಓಮ್ನಿ ಮೇಲೆ ಲಾರಿ ಮಗುಚಿ ಬಿದ್ದು ಕಾರಿನಲ್ಲಿದ್ದ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಸುರತ್ಕಲ್​ನಲ್ಲಿ ನಡೆದಿದೆ. ಕುಳಾಯಿಯ ಗೋಕುಲನಗರ ನಿವಾಸಿ ಲೋಕೇಶ್​ ಮೃತಪಟ್ಟವರು. ಸುರತ್ಕಲ್ ಕುಳಾಯಿಯ ಹೊನ್ನಕಟ್ಟೆ ಸಿಗ್ನಲ್ ಬಳಿ ಈ ದುರ್ಘಟನೆ ನಡೆದಿದೆ.

ಓಮ್ನಿ ಕಾರಿನ ಮೇಲೆ ಲಾರಿ ಪಲ್ಟಿ

ಮಂಗಳೂರು ಕಡೆಯಿಂದ ಬಂದ ಲೋಕೇಶ್​(38) ಅವರು ರಾಷ್ಟ್ರೀಯ ಹೆದ್ದಾರಿ 66ರ ಹೊನ್ನಕಟ್ಟೆ ಸಿಗ್ನಲ್ ಬಳಿಯಿಂದ ಎಂಆರ್​ಪಿಎಲ್ ಕಡೆಗೆ ಹೋಗಲು ರಸ್ತೆಯ ಪಕ್ಕದಲ್ಲಿ ಕಾರು ನಿಲ್ಲಿಸಿದ್ದರು. ಈ ವೇಳೆ, ಹಿಂಬದಿಯಿಂದ ಬಂದ ಲಾರಿ ಏಕಾಏಕಿ ಓಮ್ನಿ ಮೇಲೆ ಮಗುಚಿ ಬಿದ್ದಿದೆ. ಈ ವೇಳೆ ಕಾರಿನೊಳಗಿದ್ದ ಲೋಕೇಶ್​ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಓಮ್ನಿ ಕಾರಿನ ಮೇಲೆ ಲಾರಿ ಪಲ್ಟಿ

ಇದೇ ವೇಳೆ, ಕಾರಿನ ಮುಂಭಾಗದಲ್ಲಿ ಇದ್ದ ದ್ವಿಚಕ್ರ ವಾಹನಕ್ಕೂ ಹಾನಿಯಾಗಿದ್ದು ದ್ವಿಚಕ್ರ ವಾಹನ ಸವಾರ ತನ್ನ ಸ್ಕೂಟರ್‌ ಬಿಟ್ಟು ಓಡಿದ ಪರಿಣಾಮ ಪಾರಾಗಿದ್ದಾರೆ. ಮಂಗಳೂರು ಉತ್ತರ ಸಂಚಾರ ವಿಭಾಗದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದ ಕಾರು, ಇಬ್ಬರ ದುರ್ಮರಣ

Last Updated : Jul 8, 2022, 7:39 PM IST

ABOUT THE AUTHOR

...view details